Thursday, August 13, 2026
Thursday, August 13, 2026

ಈದ್ಗ ಮೈದಾನ ಯಥಾಸ್ಥಿತಿ ಕಾಪಾಡಿ-ಹೈಕೋರ್ಟ್ ಸೂಚನೆ

Date:

ಚಾಮರಾಜಪೇಟೆ ಈದ್ಗಾ ಮೈದಾನ ಮಾಲೀಕತ್ವ ವಿವಾದ ಸಂಬಂಧ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಈದ್ಗಾ ಮೈದಾನ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳು ವಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಆಟದ ಮೈದಾನವಾಗಿ ಬಳಸಬೇಕು ಎಂದು ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ತಿಳಿಸಿದೆ.

ರಂಜಾನ್, ಬಕ್ರೀದ್ ಸಂದರ್ಭದಲ್ಲಿ ಮಾತ್ರ ಪ್ರಾರ್ಥನೆಗೆ ಬಳಸಲು ಅನುಮತಿ ಇದೆ. ಆದರೆ, ಶುಕ್ರವಾರದ ಪ್ರಾರ್ಥನೆಗೆ ಅವಕಾಶ ಇಲ್ಲ ಎಂದು ಹೈಕೋರ್ಟ್ ತಿಳಿಸಿದೆ.

ಮುಂದಿನ ಆದೇಶದವರೆಗೂ ಯಥಾಸ್ಥಿತಿ ಕಾಪಾಡಲು ಹೈಕೋರ್ಟ್ ಸೂಚಿಸಿದೆ. ಯಾವುದೇ ವಿವಾದಕ್ಕೆ ಆಸ್ಪದ ಮಾಡಿಕೊಡಬೇಡಿ. ಮೈದಾನವಾಗಿರುವುದರಿಂದ ಯಥಾಸ್ಥಿತಿ ಕಾಪಾಡಿ ಎಂದು ಸರ್ಕಾರಕ್ಕೆ ಪೀಠ ಸೂಚನೆ ನೀಡಿದೆ. ನ್ಯಾ. ಹೇಮಂತ್ ಚಂದನ್ ಗೌಡರ್ ಅವರಿದ್ದ ಪೀಠ ಆದೇಶ ನೀಡಿದೆ.

ಈದ್ಗಾ ವಿವಾದ ಸಂಬಂಧ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಮೈದಾನವನ್ನು ಆಟಕ್ಕೆ ಬಳಸಬಹುದು. ಶುಕ್ರವಾರದ ಪ್ರಾರ್ಥನೆಗೆ ಅವಕಾಶ ಇಲ್ಲ. ರಂಜಾನ್ ಮತ್ತು ಬಕ್ರೀದ್ ಸಂದರ್ಭದಲ್ಲಿ ಪ್ರಾರ್ಥನೆ ಸಲ್ಲಿಸಲು ಅನುಮತಿ ಇದೆ. ಇದನ್ನು ಹುಬ್ಬಳ್ಳಿ ಈದ್ಗಾ ಮೈದಾನದ ರೀತಿಯಲ್ಲಿ ಮಾಡಬೇಡಿ ಎಂದು ತಿಳಿಸಿದೆ.

ಅಲ್ಲದೇ, ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ಮಾಡುವುದಕ್ಕೆ ಯಾವುದೇ ಅನುಮತಿ ಬೇಕಿಲ್ಲ ಎಂದು ಅಭಿಪ್ರಾಯಪಟ್ಟಿದೆ.ಮುಂದಿನ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್ 23ಕ್ಕೆ ಮುಂದೂಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...