Thursday, June 18, 2026
Thursday, June 18, 2026

ಸೆಪ್ಟೆಂಬರ್ ನಿಂದ ರೈತಶಕ್ತಿ ಯೋಜನೆ ಚಾಲನೆ-ಬಿ.ಸಿ.ಪಾಟೀಲ್

Date:

ರೈತರಿಗೆ ಇನ್ನಷ್ಟು ಸೌಲಭ್ಯ ಕಲ್ಪಿಸಲು ಕೃಷಿ ಇಲಾಖೆ ಮುಂದಾಗಿದ್ದು, ಕೃಷಿಕರ ಮೇಲಿನ ಹೊರೆ ತಪ್ಪಿಸುವ ಸಲುವಾಗಿ ಬಜೆಟ್‌ನಲ್ಲಿ ಘೋಷಿಸಿದಂತೆ ” ರೈತ ಶಕ್ತಿ ಯೋಜನೆ” ಶೀಘ್ರವೇ ಚಾಲನೆ‌ ಸಿಗಲಿದೆ.

ರೈತರಿಗೆ ಕೃಷಿ ಯಾಂತ್ರೀಕರಣವು ಡೀಸೆಲ್‌ ಇಂಧನದ ಮೇಲೆ ಬಹುತೇಕ‌ ಅವಲಂಬಿತವಾಗಿದೆ.ಹೀಗಾಗಿ ರೈತರ ಮೇಲಿನ ಆರ್ಥಿಕ ಹೊರೆ ಆದಷ್ಟು ಕಡಿತಗೊಳಿಸುವ ನಿಟ್ಟಿನಲ್ಲಿ 2022 23 ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಬರುವ ಸೆಪ್ಟೆಂಬರ್‌ನಲ್ಲಿ ” ರೈತ ಶಕ್ತಿ ಯೋಜನೆಗೆ” ಚಾಲನೆ ಸಿಗಲಿದೆ ಎಂದು ಕೃಷಿ ಸಚಿವ ಬಿ‌.ಸಿ.ಪಾಟೀಲ್ ಅವರು ತಿಳಿಸಿದ್ದಾರೆ.

ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ಯಂತ್ರೋಪಕರಣಗಳನ್ನು ಪ್ರೋತ್ಸಾಹಿಸಲು ಹಾಗೂ ಇಂಧನದ ವೆಚ್ಚದ ಹೊರೆಯನ್ನು ಕಡಿಮೆ ಮಾಡಲು ಕರ್ನಾಟಕ ರಾಜ್ಯದಲ್ಲಿಯೇ ಮೊದಲ ಬಾರಿಗೆ ಈ “ರೈತ ಶಕ್ತಿ ಯೋಜನೆ” ಜಾರಿಯಾಗಲಿದೆ.

ಪ್ರತಿ ಎಕರೆಗೆ ರೂ .250 / – ಗಳಂತೆ ಗರಿಷ್ಠ ಐದು ಎಕರೆಗೆ ಡಿ.ಬಿ.ಟಿ ಮೂಲಕ ಡೀಸೆಲ್ ಗೆ ಸಹಾಯಧನವನ್ನು ನೀಡಲು ” ರೈತ ಶಕ್ತಿ ” ಎಂಬ ಹೊಸ ಯೋಜನೆಯನ್ನು ಘೋಷಣೆ ಮಾಡಲಾಗಿದ್ದು , ಯೋಜನೆಯ ಅನುಷ್ಠಾನಕ್ಕಾಗಿ ಸರ್ಕಾರಿ ಆದೇಶ ಹೊರಡಿಸಲಾಗಿದೆ‌.

ರಾಜ್ಯದ ರೈತರಿಗೆ ಕೃಷಿ ಇಲಾಖೆಯ ಎಲ್ಲಾ ಯೋಜನೆಗಳನ್ನು ರೈತರಿಗೆ FRUITS ಫೋರ್ಟಲ್‌‌ ಮೂಲಕ ನೋಂದಣಿ ಗುರುತಿನ ಸಂಖ್ಯೆ ಬಳಸಿ ಕಿಸಾನ್ ತಂತ್ರಾಂಶದ ಮೂಲಕವೇ ಅನುಷ್ಠಾನ ಮಾಡಲಾಗುತ್ತಿದೆ . ಅದೇ ರೀತಿಯಲ್ಲಿ FRUITS ಪೋರ್ಟಲ್‌ನಲ್ಲಿ ನೊಂದಣಿಗೊಂಡ ರಾಜ್ಯದ ಎಲ್ಲಾ ರೈತರಿಗೆ ರೈತ ಶಕ್ತಿ ಯೋಜನೆಯನ್ನು , ಸಹ ಕಿಸಾನ್ ತಂತ್ರಾಂಶ ಬಳಸಿಕೊಂಡು ನೇರ ವರ್ಗಾವಣೆ ( DBT ) ಮೂಲಕವೇ ಯೋಜನೆ ಅನುಷ್ಠಾನ ಮಾಡಲಾಗುವುದು. ನಗದು ಯೋಜನೆಯ FRUITS ಪೋರ್ಟಲ್ ನಲ್ಲಿ ನೊಂದಣಿಗೊಂಡ ರಾಜ್ಯದ ಎಲ್ಲಾ ರೈತರು ಈ ಯೋಜನೆಯ ಫಲಾನುಭವಿಗಳಾಗಿರುತ್ತಾರೆ.ಈ ಯೋಜನೆಯು ಅರ್ಹತಾಧಾರಿತ ಯೋಜನೆಯಾಗಿರುವುದರಿಂದ ಯಾವುದೇ ರೈತರು ಪ್ರತ್ಯೇಕವಾಗಿ ವೈಯಕ್ತಿಕ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ , ದಾಖಲೆಗಳ ಪರಿಶೀಲನೆಯನ್ನು ಸರ್ಕಾರದ FRUITS ಪೋರ್ಟಲ್ ನಲ್ಲಿ ಲಭ್ಯವಿರುವ ದತ್ತಾಂಶಗಳ ಆಧಾರದ ಮೇಲೆ ಮಾಡಲಾಗುವುದು . FRUITS ಪೋರ್ಟಲ್‌ನಲ್ಲಿ ನಮೂದಿಸಲಾದ ಹಿಡುವಳಿಯ ವಿಸ್ತೀರ್ಣದ ಆಧಾರದ ಮೇಲೆ ರೈತರಿಗೆ ಡೀಸೆಲ್‌ ಸಹಾಯಧನವನ್ನು ನೇರ ನಗದು ವರ್ಗಾವಣೆ ( DBT ) ಮೂಲಕ ರೈತರ ಖಾತೆಗೆ ವರ್ಗಾಯಿಸಲಾಗುವುದು . FRUITS ತಂತ್ರಾಂಶದಲ್ಲಿ ನೋಂದಾವಣಿಗೊಂಡ ರೈತರು ಹೊಂದಿರುವ ಭೂ ಹಿಡುವಳಿಯ ಆಧಾರದ ಮೇಲೆ ಪ್ರತಿಯೊಬ್ಬ ರೈತರಿಗೆ ಪ್ರತಿ ಎಕರೆಗೆ ರೂ .250 / – ರಂತೆ ಗರಿಷ್ಠ ಐದು ಎಕರೆಗೆ ರೂ .1250 / – ರವರಗೆ ಡೀಸೆಲ್ ಸಹಾಯಧನವನ್ನು ಒದಗಿಸಲಾಗುವುದು . ಅರ್ಹ ರೈತರಿಗೆ ಡೀಸಲ್ ಸಹಾಯಧನದ ಮೊತ್ತವನ್ನು ಸರ್ಕಾರದ DBT ವೋರ್ಟಲ್ ಮೂಲಕ ಆಧಾರದ ಸೀಡೆಡ್ ಬ್ಯಾಂಕ್ / ಪೋಸ್ಟ್ ಆಫೀಸ್ ಖಾತೆಗೆ ವರ್ಷಕ್ಕೊಮ್ಮೆ ವರ್ಗಾಯಿಸಲಾಗುವುದು.

ರೈತರು ನಿಯಮಾನುಸಾರ ಸೂಚಿಸಿದಂತೆ ಯೋಜನೆಯ ಅರ್ಹತಾಧಾರರಾಗಿ ಫಲಾನುಭವಿಗಳಾಗುವಂತೆ ಕೃಷಿ ಸಚಿವರು ರಾಜ್ಯದ ರೈತರಿಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...