Friday, September 27, 2024
Friday, September 27, 2024

ಬಸ್ ಸ್ಟಾಂಡ್ ಕಳಪೆ ಕಾಮಗಾರಿ ಜೆಡಿಎಸ್ ಪ್ರತಿಭಟನೆ

Date:

ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಬೃಹತ್ ಕಳಪೆ ಕಾಮಗಾರಿ ನಡೆದಿದ್ದು ಇಂದು ಬೆಳಗಾವಿ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಶ್ರೀ ಶಂಕರ ಅಣ್ಣ ಮಾಡಲಗಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಒಳಗಡೆ ಭೇಟಿಕೊಟ್ಟು ಕಾಮಗಾರಿಯನ್ನು ವೀಕ್ಷಣೆ ಮಾಡಿದರು ನಂತರ ಮಾತನಾಡಿ ಇದು ಒಂದು ಬೃಹತ್ ಕಳಪೆ ಕಾಮಗಾರಿ ನಡೆದಿದ್ದು ಇದನ್ನ ತಕ್ಷಣವೇ ಈ ಕಾಮಗಾರಿಯನ್ನು ನಿಲ್ಲಿಸಬೇಕು.

ಹಾಗೂ ತಕ್ಷಣವೇ ಸ್ಥಳೀಯ ಶಾಸಕರಾದ ಹಾಗೂ ಮಾಜಿ ಶಾಸಕರುಗಳು ಇದನ್ನು ಬಂದು ಕಳಪೆ ಕಾಮಗಾರಿನು ವೀಕ್ಷಣೆ ಮಾಡಬೇಕೆಂದು ಶ್ರೀ ಶಂಕರ ಮಾಡಲಗಿ ಅವರು ಕೆಎಸ್ಆರ್ಟಿಸಿ ಬಸ್ ಸ್ಟ್ಯಾಂಡ್ ಒಳಗಡೆ ಪ್ರತಿಭಟನೆ ಮಾಡುವ ಮುಖಾಂತರ ರಸ್ತೆ ಮಧ್ಯ ಕುಳಿತುಕೊಂಡು ಸರ್ಕಾರದ ವಿರುದ್ಧ ಸ್ಥಳೀಯ ಶಾಸಕರ ವಿರುದ್ಧ ಪ್ರತಿಭಟನೆ ಮುಖಾಂತರ ಎಚ್ಚರಿಕೆಯನ್ನು ನೀಡಿದರು.

ಮುಂದಿನ ದಿನಗಳಲ್ಲಿ ಈ ಕಾಮಗಾರಿಯನ್ನು ಸರಿಯಾಗಿ ಮಾಡಬೇಕೆಂದು ಪ್ರತಿಭಟನೆ ಮುಖಾಂತರ ಇಂಜಿನಿಯರ್ ಗಳಿಗೆ ಹಾಗೂ ಸ್ಥಳೀಯ ಶಾಸಕರಿಗೆ ಎಚ್ಚರಿಕೆ ನೀಡಿದರು ಪ್ರತಿಭಟನೆಯಲ್ಲಿ ಭಾಗಿಯಾದಂತ ಜೆಡಿಎಸ್ ಕಾರ್ಯಕರ್ತರುಗಳಾದ ಬೈಲಹೊಂಗಲ ತಾಲೂಕು ಅಧ್ಯಕ್ಷರಾದ ಸತ್ಯನ ಗೌಡ ಪಾಟೀಲ್ ಹಾಗೂ ನಿಂಗಪ್ಪ ಕಾಂಬಳೆ ಮತ್ತು ಬೈಲಹೊಂಗಲ ಸಿಟಿ ಅಧ್ಯಕ್ಷರಾದ ಆನಂದ ಕಾಗರ್ ಮತ್ತು ಬೆಳಗಾವಿ ಜಿಲ್ಲಾ ಜೆಡಿಎಸ್ ವಿದ್ಯಾರ್ಥಿ ಘಟಕ ಅಧ್ಯಕ್ಷರಾದ ಅರ್ಬಾಜ್ ಮುಲ್ಲಾ ಮತ್ತು ಸಂಜು ಮುರುಗೋಡ ಹಾಗೂ ಎಲ್ಲಾ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ವರದಿ ಕೃಪೆ: ಸುದರ್ಶನ್ ಬೋಳಶೆಟ್ಟಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hassan Manikya Prakashana ಶಿವಮೊಗ್ಗದ ಕವಿ ಶಿ.ಜು.ಪಾಶಾ ಅವರಿಗೆ “ಜನ್ನ ಕಾವ್ಯ ಪ್ರಶಸ್ತಿ”

Hassan Manikya Prakashana ಹಾಸನದ ಮಾಣಿಕ್ಯ ಪ್ರಕಾಶನ(ರಿ) ರಾಜ್ಯಮಟ್ಟದ ಜನ್ನ ಕಾವ್ಯ...

Vajreshwari Co Operative Society ಶ್ರೀವಜ್ರೇಶ್ವರಿ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರ

Vajreshwari Co Operative Society ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಶ್ರೀ...

Inner Wheel Shivamogga ದುರ್ಬಲರಿಗೆ ನೆರವು ನೀಡಿದಾಗ ಸೇವೆ ಸಾರ್ಥಕ- ಶಿಲ್ಪ ಗೋಪಿನಾಥ್

Inner Wheel Shivamogga ನಾವು ಮಾಡುವ ಸೇವೆ ಸಾರ್ಥಕಗೊಳ್ಳಬೇಕಾದರೆ...

National Education Committee ಬೆಳಗುತ್ತಿ & ಮಲ್ಲಿಗೇನಹಳ್ಳಿಯಲ್ಲಿ ಗಮನ ಸೆಳೆದ ಎನ್.ಎಸ್.ಎಸ್. ವಾರ್ಷಿಕ ಶಿಬಿರ

National Education Committee ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿರಂಗಪ್ರಯೋಗದ...