Thursday, August 13, 2026
Thursday, August 13, 2026

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಕಾನೂನು ಸುವ್ಯವಸ್ಥೆ ನೋಡಿ ತೀರ್ಮಾನ

Date:

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಕುರಿತು ಹೈಕೋರ್ಟ್ ತೀರ್ಪು ಬಂದಿದ್ದು, ನಾಳೆ ಕಂದಾಯ ಸಚಿವರು ,ಎಜೆ ಜತೆ ಸಭೆ ಮಾಡಿ ಕಾನೂನು ಸುವ್ಯವಸ್ಥೆ ನೋಡಿಕೊಂಡು ತೀರ್ಮಾನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೈಕೋರ್ಟ್ ತೀರ್ಪಿನ ಬಳಿಕ ಪ್ರತಿಕ್ರಿಯೆ ನೀಡಿದ್ದಾರೆ.

ಈಗಾಗಲೇ ಈದ್ಗಾ ಮೈದಾನದಲ್ಲಿ ಭಾರಿ ಪೊಲೀಸ್ ಕಟ್ಟೆಚ್ಚರ ವಹಿಸಲಾಗಿದ್ದು, ಹೆಚ್ಚುವರಿ ಪೊಲೀಸ್ ಪಡೆಗಳನ್ನೂ ಸ್ಥಳಕ್ಕೆ ಕಳುಹಿಸಲಾಗುತ್ತಿರುವ ಬಗ್ಗೆ ವರದಿಯಾಗಿದೆ.
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ರಾಜ್ಯ ಸರಕಾರಕ್ಕೆ ಶುಕ್ರವಾರ ಅನುಮತಿ ನೀಡಿದೆ.ಆಗಸ್ಟ್‌ 31ರಿಂದ ನಿರ್ದಿಷ್ಟ ಅವಧಿಗೆ ಅನುಮತಿ ನೀಡಿ ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ.ಅನುಮತಿ ಕೋರಿದ ಅರ್ಜಿಗಳನ್ನು ಪರಿಶೀಲಿಸಿ ಹೈಕೋರ್ಟ್ ಈ ತೀರ್ಪು ನೀಡಿದೆ.

ಬಹುಜನರ ಬೇಡಿಕೆ ಈಡೇರಿಸುವ ಕೆಲಸ ಮಾಡುತ್ತೇವೆ.ಯಾರು ಹಬ್ಬ ಆಚರಣೆ ಮಾಡಬೇಕು ಎಂಬ ಬಗ್ಗೆ ನಾಳೆ ತೀರ್ಮಾನ ಮಾಡುತ್ತೇವೆ.ಹುಬ್ಬಳ್ಳಿಯಲ್ಲಿ ಗಣೇಶೋತ್ಸವ ಆಚರಣೆಗೆ ಸಮಿತಿ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ನ ಮಾರ್ಗ ಸೂಚಿಗಳನ್ನು ಅನುಸರಿಸಬೇಕು ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...