Thursday, March 19, 2026
Thursday, March 19, 2026

ಚಿತ್ರದುರ್ಗ ಶರಣರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ದೂರು ದಾಖಲು

Date:

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಮೂವರು ಹಾಗೂ ಮೈಸೂರಿನ ಇಬ್ಬರ ವಿರುದ್ಧ ಪೋಕ್ಸೋ ಕಾಯ್ದೆಯಡಿಯಲ್ಲಿ ನಜರಾಬಾದ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ದೂರು ದಾಖಲಾಗಿದೆ. ಈ ಪ್ರಕರಣದಲ್ಲಿ ಮುರುಘಾ ಶರಣರು ಮೊದಲ ಆರೋಪಿಯಾಗಿದ್ದರೇ, ವಾರ್ಡನ್ 2ನೇ ಆರೋಪಿಯನ್ನಾಗಿ ಮಾಡಲಾಗಿದೆ.

ಇನ್ನೂ ಬಸವಾದಿತ್ಯ ಮೂರನೇ ಆರೋಪಿಯಾಗಿದ್ದಾರೆ. ಇದಲ್ಲದೇ, ಮಠದ ಭಕ್ತರೆನ್ನಲಾದಂತ ಮೈಸೂರಿನ ಪರಮಶಿವಯ್ಯ ಹಾಗೂ ವಕೀಲ ಗಂಗಾಧರಯ್ಯ 4,5ನೇ ಆರೋಪಿಗಳಾಗಿದ್ದಾರೆ.

ಅಂದಹಾಗೇ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಸಿ ಚಂದ್ರಕುಮಾರ್ ನೀಡಿದಂತ ದೂರಿನ ಮೇರೆಗೆ, ಮೈಸೂರಿನ ನಜರಾಬಾದ್ ಠಾಣೆಯಲ್ಲಿ ನಾಡಿನ ಪ್ರತಿಷ್ಠಿತ ಮಠವಾದಂತ ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಇಬ್ಬರು ವಿದ್ಯಾರ್ಥಿನಿಯರ ಹೇಳಿಕೆ ಆಧರಿಸಿ ಎಫ್ ಐ ಆರ್ ದಾಖಲಾಗಿದೆ.

ಇಬ್ಬರು ವಿದ್ಯಾರ್ಥಿನಿಯರಲ್ಲಿ ಒಬ್ಬರಿಗೆ ಮೂರೂವರೆ ವರ್ಷಗಳಿಂದ, ಮತ್ತೊಬ್ಬ ವಿದ್ಯಾರ್ಥಿನಿಗೆ ಒಂದೂವರೆ ವರ್ಷದಿಂದ ನಿರಂತರವಾಗಿ ಲೈಂಗಿಕ ದೌರ್ಜನ್ಯ ಮಾಡುತ್ತಿರೋದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದಕ್ಕೆ ಸಹಕರಿಸಿದಂತ ಉಳಿದ ಆರೋಪಿಗಳ ಬಗ್ಗೆಯೂ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಆಪ್ತ ಸಮಾಲೋಚನೆ ಸಮಯದಲ್ಲಿ ವಿದ್ಯಾರ್ಥಿನಿಯರು ಹೇಳಿಕೆ ಆದರಿಸಿ ದೂರು ಸಲ್ಲಿಸಲಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...