Thursday, March 19, 2026
Thursday, March 19, 2026

ಮಳೆಹಾನಿ ಪರಿಹಾರಕ್ಕೆ ವಿಳಂಬ ಮಾಡಬೇಡಿ- ಬೊಮ್ಮಾಯಿ

Date:

ಭಾರಿ ಮಳೆ, ಪ್ರವಾಹದಿಂದ ಬಾಧಿತ ಸಂತ್ರಸ್ತರಿಗೆ ಮನೆ ಹಾಗೂ ಬೆಳೆ ಪರಿಹಾರ ವಿತರಣೆಯಲ್ಲಿ ವಿಳಂಬ ಸಲ್ಲದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್​ ಸೂಚನೆ ನೀಡಿದ್ದಾರೆ.

ಭಾರಿ ಮಳೆಯಿಂದ ಹಾನಿಗೆ ಒಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗಳ ಜತೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಿಂದ ವಿಡಿಯೋ ಸಂವಾದ ನಡೆಸಿದರು.

ಕೆರೆಗಳು ತುಂಬಿರುವ ಕಾರಣ ಬಿರುಕು ಉಂಟಾಗದಂತೆ ನಿಗಾವಹಿಸಬೇಕು. ಅದರಲ್ಲೂ ದೊಡ್ಡ ಕೆರೆಗಳಿರುವೆಡೆ ಎಚ್ಚರಿಕೆವಹಿಸಿ ಯಾವುದೇ ಸಾವು, ನೋವಾಗದಂತೆ ನೋಡಿಕೊಳ್ಳಬೇಕು. ತುಂಬಿದ ಕೆರೆಗಳ ಸಮೀಕ್ಷೆ ಕೈಗೆತ್ತಿಕೊಂಡು ಅಗತ್ಯವಿರುವೆಡೆ ತುರ್ತಾಗಿ ದುರಸ್ತಿ ಕಾಮಗಾರಿ ಕೈಗೊಳ್ಳಬೇಕು ಎಂದು ಸಿಎಂ ಬೊಮ್ಮಾಯಿ ಸಲಹೆ ನೀಡಿದರು.

ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲೂ ಹಣವಿದೆ. ಅಲ್ಲದೆ, ತುರ್ತು ಹಾಗೂ ತಾತ್ಕಾಲಿಕ ಕೆಲಸಗಳಿಗೆ ಬಿಡುಗಡೆ ಹಣ ಬಳಸಿಕೊಂಡು ಮನೆ ಹಾಗೂ ಬೆಳೆ ಹಾನಿಗೆ ತಕ್ಷಣವೇ ಪರಿಹಾರ ವಿತರಿಸಿ, ಬಾಧಿತರ ಕಷ್ಟಗಳಿಗೆ ಯುದ್ಧೋಪಾದಿಯಲ್ಲಿ ಸ್ಪಂದಿಸಬೇಕು ಎಂದರು.

ಮಳೆಯಿಂದಾಗಿ ಬೆಂಗಳೂರು ಮತ್ತು ಮೈಸೂರು ಹೆದ್ದಾರಿಯಲ್ಲಿ ನೀರು ನಿಂತು ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗಿರುವುದು ಗಮನಕ್ಕೆ ಬಂದಿದೆ. ವಾಹನದಟ್ಟಣೆ ಮಾರ್ಗಯಿದಾಗಿದ್ದು, ಸುಗಮ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಅಗತ್ಯವಿದೆ. ಈ ಸಮಸ್ಯೆಗೆ ಪರಿಹಾರವಾಗಿ ಪರ್ಯಾಯ ಸಂಚಾರ ವ್ಯವಸ್ಥೆ ಮಾಡಬೇಕು. ಮೈಸೂರು, ರಾಮನಗರ ಮತ್ತು ಮಂಡ್ಯ ಎಸ್​ಪಿ ಜಂಟಿಯಾಗಿ ಈ ಹೊಣೆ ನಿರ್ವಹಿಸಬೇಕು ಎಂದು ಸಿಎಂ ಸೂಚಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...