Thursday, June 18, 2026
Thursday, June 18, 2026

ಮಳೆಹಾನಿ ಪರಿಹಾರಕ್ಕೆ ವಿಳಂಬ ಮಾಡಬೇಡಿ- ಬೊಮ್ಮಾಯಿ

Date:

ಭಾರಿ ಮಳೆ, ಪ್ರವಾಹದಿಂದ ಬಾಧಿತ ಸಂತ್ರಸ್ತರಿಗೆ ಮನೆ ಹಾಗೂ ಬೆಳೆ ಪರಿಹಾರ ವಿತರಣೆಯಲ್ಲಿ ವಿಳಂಬ ಸಲ್ಲದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್​ ಸೂಚನೆ ನೀಡಿದ್ದಾರೆ.

ಭಾರಿ ಮಳೆಯಿಂದ ಹಾನಿಗೆ ಒಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗಳ ಜತೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಿಂದ ವಿಡಿಯೋ ಸಂವಾದ ನಡೆಸಿದರು.

ಕೆರೆಗಳು ತುಂಬಿರುವ ಕಾರಣ ಬಿರುಕು ಉಂಟಾಗದಂತೆ ನಿಗಾವಹಿಸಬೇಕು. ಅದರಲ್ಲೂ ದೊಡ್ಡ ಕೆರೆಗಳಿರುವೆಡೆ ಎಚ್ಚರಿಕೆವಹಿಸಿ ಯಾವುದೇ ಸಾವು, ನೋವಾಗದಂತೆ ನೋಡಿಕೊಳ್ಳಬೇಕು. ತುಂಬಿದ ಕೆರೆಗಳ ಸಮೀಕ್ಷೆ ಕೈಗೆತ್ತಿಕೊಂಡು ಅಗತ್ಯವಿರುವೆಡೆ ತುರ್ತಾಗಿ ದುರಸ್ತಿ ಕಾಮಗಾರಿ ಕೈಗೊಳ್ಳಬೇಕು ಎಂದು ಸಿಎಂ ಬೊಮ್ಮಾಯಿ ಸಲಹೆ ನೀಡಿದರು.

ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲೂ ಹಣವಿದೆ. ಅಲ್ಲದೆ, ತುರ್ತು ಹಾಗೂ ತಾತ್ಕಾಲಿಕ ಕೆಲಸಗಳಿಗೆ ಬಿಡುಗಡೆ ಹಣ ಬಳಸಿಕೊಂಡು ಮನೆ ಹಾಗೂ ಬೆಳೆ ಹಾನಿಗೆ ತಕ್ಷಣವೇ ಪರಿಹಾರ ವಿತರಿಸಿ, ಬಾಧಿತರ ಕಷ್ಟಗಳಿಗೆ ಯುದ್ಧೋಪಾದಿಯಲ್ಲಿ ಸ್ಪಂದಿಸಬೇಕು ಎಂದರು.

ಮಳೆಯಿಂದಾಗಿ ಬೆಂಗಳೂರು ಮತ್ತು ಮೈಸೂರು ಹೆದ್ದಾರಿಯಲ್ಲಿ ನೀರು ನಿಂತು ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗಿರುವುದು ಗಮನಕ್ಕೆ ಬಂದಿದೆ. ವಾಹನದಟ್ಟಣೆ ಮಾರ್ಗಯಿದಾಗಿದ್ದು, ಸುಗಮ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಅಗತ್ಯವಿದೆ. ಈ ಸಮಸ್ಯೆಗೆ ಪರಿಹಾರವಾಗಿ ಪರ್ಯಾಯ ಸಂಚಾರ ವ್ಯವಸ್ಥೆ ಮಾಡಬೇಕು. ಮೈಸೂರು, ರಾಮನಗರ ಮತ್ತು ಮಂಡ್ಯ ಎಸ್​ಪಿ ಜಂಟಿಯಾಗಿ ಈ ಹೊಣೆ ನಿರ್ವಹಿಸಬೇಕು ಎಂದು ಸಿಎಂ ಸೂಚಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...