Saturday, December 6, 2025
Saturday, December 6, 2025

ಪರಿಸರ ಸ್ನೇಹಿ ಗಣಪ ಮೂರ್ತಿ ವಿತರಣೆ

Date:

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಭಾನುವಾರ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಔಷಧೀಯ ಸಸ್ಯಗಳ ಬೀಜಗಳನ್ನು ಒಳಗೊಂಡಿರುವ 10,000 ಮಣ್ಣಿನ ಗಣೇಶ ಮೂರ್ತಿಗಳನ್ನು ವಿತರಿಸಲಿದೆ.

ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಬಳಸುವ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ, ಈ ಕಾರ್ಯಕ್ರಮವು ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ಗೆ ಸೇರುವ ಗುರಿಯನ್ನು ಹೊಂದಿದೆ.

ಶ್ರೀ ವಿದ್ಯಾರಣ್ಯ ಯುವಕ ಸಂಘದ ಆಯೋಜಿಸಲಾದ ಈ ಕಾರ್ಯಕ್ರಮವು ಪರಿಸರ ಸ್ನೇಹಿ ಗಣೇಶ ಚತುರ್ಥಿಯ ಆಚರಣೆಯನ್ನು ಉತ್ತೇಜಿಸುತ್ತದೆ. ಹಬ್ಬವನ್ನು ಆಚರಿಸುವ ಸಾರ್ವಜನಿಕರು, ವಿದ್ಯಾರ್ಥಿಗಳು ಮತ್ತು ಯುವ ಸಂಘಟನೆಗಳಲ್ಲಿ ಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಮೈಸೂರು ರಾಜವಂಶಸ್ಥರಾದ ಯುದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸಾರ್ವಜನಿಕರಿಗೆ ಮತ್ತು ಸಂಸ್ಥೆಗಳಿಗೆ ಮನೆ ಹಾಗೂ ಇತರ ಸ್ಥಳಗಳಲ್ಲಿ ಪ್ರತಿಷ್ಠಾಪಿಸಲು ವಿಗ್ರಹಗಳನ್ನು ವಿತರಿಸಿದರು, ಮೊದಲು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ನಂತರ ಬಕೆಟ್ ಮತ್ತು ಮಡಕೆಗಳಲ್ಲಿ ಮುಳುಗಿಸಬೇಕು, ಇದರಿಂದ ಮಣ್ಣಿನ ಗಣಪ ಔಷಧೀಯ ಸಸ್ಯಗಳಾಗಿ ಪರಿವರ್ತನೆಯಾಗಲಿದೆ.

ಸಾರ್ವಜನಿಕರು ಮತ್ತು ಸಂಘಟಕರು ಯಾವುದೇ ರಾಸಾಯನಿಕಗಳನ್ನು ಹೊಂದಿರದ ಪರಿಸರ ಸ್ನೇಹಿ ವಿಗ್ರಹಗಳನ್ನು ಖರೀದಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆಗಳನ್ನು ನೀಡಿದೆ. ಅಲ್ಲದೆ, ಕೆರೆಗಳಲ್ಲಿ ವಿಗ್ರಹಗಳನ್ನು ಮುಳುಗಿಸುವ ಮುನ್ನ ಕಾಗದದ ಬಟ್ಟಲುಗಳನ್ನು ಬಳಸಿ ಪ್ರಸಾದ ವಿತರಿಸಬೇಕು ಹೂಮಾಲೆ ತೆಗೆಯಬೇಕು. ಸಾರ್ವಜನಿಕರು ಮೂರ್ತಿಗಳನ್ನು ಅಲಂಕರಿಸಲು ಪ್ಲಾಸ್ಟಿಕ್ ಬದಲಿಗೆ ನೈಸರ್ಗಿಕ ಹೂವುಗಳನ್ನು ಬಳಸಲು ಸೂಚಿಸಲಾಗಿದೆ.

ಗಣೇಶ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಮಣ್ಣಿನಿಂದ ತಯಾರಿಸಿದ ಮೂರ್ತಿಗಳನ್ನು ವಿತರಿಸಲು ಕೆಎಸ್‌ಪಿಸಿಬಿ ನಿರ್ಧರಿಸಿದೆ. ಪರಿಸರ ಸ್ನೇಹಿಯಾಗಿ ಹಬ್ಬವನ್ನು ಆಚರಿಸಲು ಸಾರ್ವಜನಿಕರು ಕೈ ಜೋಡಿಸಬೇಕೆಂದು ಮನವಿ ಮಾಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...