ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಗಳಿಗೆ ತಲೆನೋವಾಗಿದ್ದ ಹೆಣ್ಣು ಚಿರತೆ ಈಗ ಬೋನಿನಲ್ಲಿ ಸೆರೆ ಹಿಡಿಯಲಾಗಿದೆ.
ಶಿವಮೊಗ್ಗ ಜಿಲ್ಲೆಯ ಕೊಮ್ಮನಾಳು ಗ್ರಾಮದಲ್ಲಿ ಚಿರತೆಯನ್ನು ಸೆರೆ ಹಿಡಿಯಲಾಗಿದೆ.
ಶಿವಮೊಗ್ಗ ಗ್ರಾಮಾಂತರ ಭಾಗದ ಕೊಮ್ಮನಾಳು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚಿರತೆ ಕಾಣಿಸಿಕೊಂಡಿತ್ತು.
ಬನ್ನಿಕೆರೆ ಗ್ರಾಮದ ಹೊನ್ನಾಳಿ ಭಾಗದಲ್ಲೂ ಚಿರತೆ ಕಾಣಿಸಿಕೊಂಡು, ಜನರು ಭಯಭೀತರಾಗಿದ್ದರು.
ಈ ಹಿಂದೆ ಹೊನ್ನಾಳಿಯ ಪಲವನಹಳ್ಳಿ ಗ್ರಾಮದಲ್ಲಿ ಮಹಿಳೆಯನ್ನ ಗಾಯಗೊಳಿಸಿತ್ತು.
ನಂತರ ,ಬನ್ನಿಕೆರೆ ಗ್ರಾಮದಲ್ಲಿ ಕಾಣಿಸಿಕೊಂಡು ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದರು.
ಇಂದು ಬೆಳಗ್ಗೆ ಚಿರತೆಯನ್ನು ಬೋನಿನಲ್ಲಿ ಸೆರೆ ಹಿಡಿಯಲು
ಅರಣ್ಯ ಇಲಾಖೆಯ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.