Monday, February 2, 2026
Monday, February 2, 2026

ಈದ್ಗಾ ಮೈದಾನ ವಿವಾದ ಸುಪ್ರೀಂ ಕೋರ್ಟಿಗೆ ವಕ್ಫ್ ಬೋರ್ಡ್ ಅಪೀಲು

Date:

ಚಾಮರಾಜಪೇಟೆ ಈದ್ಗಾ ಮೈದಾನವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ದ್ವಿಸದಸ್ಯ ಪೀಠ ನೀಡಿರುವ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಲು ರಾಜ್ಯ ವಕ್ಫ್ ಬೋರ್ಡ್ ನಿರ್ಧರಿಸಿದೆ ಎಂದು ಕ್ಷೇತ್ರದ ಶಾಸಕ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ಅವರು ತಿಳಿಸಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಗಸ್ಟ್ 29(ಸೋಮವಾರ) ಸುಪ್ರೀಂಕೋರ್ಟ್‍ನಲ್ಲಿ ಈ ಸಂಬಂಧ ವಕ್ಫ್ ಬೋರ್ಡ್ ಅರ್ಜಿ ಸಲ್ಲಿಸಲಿದೆ. ಅಲ್ಲದೆ, ವಕ್ಫ್ ಬೋರ್ಡ್ ಪರವಾಗಿ ವಕಾಲತ್ತು ವಹಿಸಲು ದೇಶದ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ ಸಮ್ಮತಿ ಸೂಚಿಸಿದ್ದಾರೆ’ ಎಂದು ಹೇಳಿದರು.

ಹೈಕೋರ್ಟ್ ಏಕ ಸದಸ್ಯ ಪೀಠ ಈದ್ಗಾ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡುವಂತೆ ನೀಡಿದ್ದ ಮಧ್ಯಂತರ ಆದೇಶದಿಂದಾಗಿ ಸಮಾಜದಲ್ಲಿ ಶಾಂತಿ ನೆಲೆಸಿತ್ತು. ಆದರೆ, ತದನಂತರ, ರಾಜ್ಯ ಸರಕಾರವು ಈ ಆದೇಶವನ್ನು ಪ್ರಶ್ನಿಸಿ ದ್ವಿಸದಸ್ಯ ಪೀಠದ ಮೊರೆ ಹೋಗಿ ಮನವಿ ಸಲ್ಲಿಸಿತು. ಅದನ್ನು ಪುರಸ್ಕರಿಸಿ ದ್ವಿಸದಸ್ಯ ಪೀಠವು ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಚರಿಸಲು ಅನುಮತಿ ನೀಡಿದೆ ಎಂದು ಅವರು ಹೇಳಿದರು.

ದ್ವಿಸದಸ್ಯ ಪೀಠದ ಮಧ್ಯಂತರ ಆದೇಶದಿಂದಾಗಿ ಮುಸ್ಲಿಮ್ ಸಮುದಾಯದ ಭಾವನೆಗಳಿಗೆ ಹಾನಿಯಾಗಿದೆ. ಆದುದರಿಂದ, ವಕ್ಫ್ ಬೋರ್ಡ್ ದ್ವಿಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಲು ನಿರ್ಧರಿಸಿದೆ. ಸೋಮವಾರ ಸುಪ್ರೀಂಕೋರ್ಟ್‍ನಲ್ಲಿ ಈ ಸಂಬಂಧ ಅರ್ಜಿ ಸಲ್ಲಿಸಲಿದೆ ಎಂದು ಝಮೀರ್ ಅಹ್ಮದ್ ಖಾನ್ ಅವರು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...