Monday, April 21, 2025
Monday, April 21, 2025

ರಾಜ್ಯದ ನೆರೆ ಸಂತ್ರಸ್ತರಿಗೆ ₹255 ಕೋಟಿ ಬಿಡುಗಡೆ- ಸಚಿವ ಅಶೋಕ್

Date:

ನೆರೆ ಸಂತ್ರಸ್ತರಿಗಾಗಿ ಕಂದಾಯ ಇಲಾಖೆಯಿಂದ 255 ಕೋಟಿ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ವಿಧಾನಸೌಧದಲ್ಲಿ ಕಂದಾಯ ಸಚಿವ ಆರ್​.ಅಶೋಕ್ ಅವರು ತಿಳಿಸಿದ್ದಾರೆ.

ಮಳೆ ಹಾನಿ ಕುರಿತ ವರದಿ ಪರಿಶೀಲಿಸಿ ಕೇಂದ್ರ ಸರ್ಕಾರಕ್ಕೆ ಅನದಾನ ಕೋರಿ ಮನವಿ ಸಲ್ಲಿಸಲಾಗುತ್ತೆ. ಎನ್​ಡಿಆರ್​​ಫ್ ಅಡಿ 1022.05 ಕೋಟಿ ಅನುದಾನ ಬರಬೇಕಿದೆ ಎಂದು ತಿಳಿಸಿದರು.

ಈಗಾಗಲೇ ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಭೇಟಿ ನೀಡ್ತಿದ್ದಾರೆ. ಮಳೆಯಿಂದ ಮನೆಗಳಿಗೆ ಹಾನಿಯಾದರೆ ತಕ್ಷಣ ಪರಿಹಾರ ನೀಡಲಾಗುತ್ತದೆ. ರಾಜ್ಯದಲ್ಲಿ ಜೂನ್​ನಿಂದ ಈವರೆಗೂ ಮಳೆಯಿಂದ 96 ಜನ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಯೊಳಗೆ ರಾಮನಗರ, ಬಳ್ಳಾರಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. 992 ಮನೆಗಳು ಹಾನಿಯಾಗಿವೆ. 10, 274 ಅರ್ಧ ಮನೆ ಹಾನಿಯಾಗಿವೆ. ನಿನ್ನೆ ಒಂದೇ ದಿನದಲ್ಲಿ 148 ಮನೆಗಳು ಹಾನಿಯಾಗಿದ್ದು, 258 ಪಶುಗಳು ಸಾವನ್ನಪ್ಪಿವೆ ಎಂದು ಹೇಳಿದರು.

ರಾಜ್ಯದಲ್ಲಿ 820 ಮಿಲಿಮೀಟರ್ ಮಳೆಯಾಗಿದೆ. ದಾವಣಗೆರೆ, ತುಮಕೂರು, ವಿಜಯಪುರ, ಮೈಸೂರು, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಿದೆ. ಒಟ್ಟು 27 ಜಿಲ್ಲೆಗಳಲ್ಲಿ ಅತೀ ಹೆಚ್ಚಿನ ಮಳೆಯಾಗಿದೆ. ರಾಮನಗರ, ಮಂಡ್ಯದಲ್ಲಿ 9 ಮಿಲಿಮೀಟರ್​ನಷ್ಟು ಮಳೆಯಾಗಿದೆ.

ಕಳೆದ 24 ಗಂಟೆಯಲ್ಲಿ 20 ಜಿಲ್ಲೆಯಲ್ಲಿ ಮಳೆ ಎಫೆಕ್ಟ್ ಆಗಿದೆ. 29, 967 ಜನರಿಗೆ ಸಮಸ್ಯೆ ಆಗಿದೆ. ಜುಲೈ ಮತ್ತು ಅಗಸ್ಟ್ ತಿಂಗಳಿನಲ್ಲಿ ಕೃಷಿ ಬೆಳೆ 3,100.83 ಹೆಕ್ಟೇರ್, ತೋಟಗಾರಿಕಾ ಬೆಳೆ 201.95 ಹೆಕ್ಟೇರ್, ಬಹುವಾರ್ಷಿಕ ಬೆಳೆ 265.51 ಹೆಕ್ಟೇರ್, ಮೆಕ್ಕಲು ಮತ್ತು ಕೃಷಿ ಭೂಮಿ 0.84 ಹೆಕ್ಟೇರ್ ಮತ್ತು ರೇಷ್ಮೆ ಬೆಳೆ 0.13 ಹೆಕ್ಟೇರ್​ನಷ್ಟು ಭೂಮಿ ನಾಶವಾಗಿದೆ. 467 ಜಾನುವಾರುಗಳು ಸಾವನ್ನಪ್ಪಿವೆ. 24,408 ಮನೆಗಳು ಹಾನಿಯಾಗಿವೆ. 22,734 ಕಿ.ಮೀ ರಸ್ತೆ ಹಾನಿಯಾಗಿದ್ದು, ಇದರಲ್ಲಿ ರಾಜ್ಯ ಮತ್ತು ಜಿಲ್ಲಾ ಹೆದ್ದಾರಿಗಳು 4159 ಕಿ.ಮೀ ಹಾನಿಯಾಗಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Chidambara Mahaswami ಗುಬ್ಬಿ ಚಿದಂಬರಾಶ್ರಮದಲ್ಲಿಎಲೆಕ್ಟ್ರಿಷಿಯನ್ ವೃತ್ತಿ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Sri Chidambara Mahaswami ಶ್ರೀ ಶ್ರೀ ಚಿದಂಬರ ಮಹಾಸ್ವಾಮಿಗಳು ಶ್ರೀ ಚಿದಂಬರಾಶ್ರಮವನ್ನು...

CM Siddharamaih ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸುವ ಕಾರ್ಯ ನಡೆಯುತ್ತಿದೆ- ಸಿದ್ಧರಾಮಯ್ಯ

CM Siddharamaih ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ.ಈಗಾಗಲೇ...

DC Shivamogga ಪರೀಕ್ಷಾರ್ಥಿಯ ಜನಿವಾರ ತೆಗೆಸಿದ ಪ್ರಕರಣ, ಈರ್ವರು ಗೃಹ ರಕ್ಷಕ ದಳ ಸಿಬ್ಬಂದಿ ಅಮಾನತು-ಗುರುದತ್ತ‌ ಹೆಗಡೆ

DC Shivamogga ಶಿವಮೊಗ್ಗ ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇತ್ತೀಚಿಗೆ...

Mental health ಮಾನಸಿಕ ಸಮಸ್ಯೆಗಳು‌‌ ಮತ್ತು‌ ಸೂಕ್ತ ಪರಿಹಾರಗಳು ...

Mental health ಮಾನಸಿಕ ಖಾಯಿಲೆಗಳು ಯಾರಿಗಾದರೂ ಬರಬಹುದು : ಸೂಕ್ತ...