Wednesday, February 4, 2026
Wednesday, February 4, 2026

ಭಾರತೀಯ ಆಹಾರ ನಿಗಮದಲ್ಲಿ ಉದ್ಯೋಗಾವಕಾಶಗಳು

Date:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ಆಹಾರ ನಿಗಮದ ಅಧಿಕೃತ ವೆಬ್‌ಸೈಟ್ fci.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

FCI Recruitment 2022: ಭಾರತೀಯ ಆಹಾರ ನಿಗಮ (FCI) ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಎಫ್​ಸಿಐನ ವಿವಿಧ ವಲಯಗಳಲ್ಲಿನ ಮ್ಯಾನೇಜರ್ (ಜನರಲ್ / ಡಿಪೋ / ಅಕೌಂಟ್ / ಟೆಕ್ನಿಕಲ್ / ಸಿವಿಲ್ ಇಂಜಿನಿಯರಿಂಗ್ / ಎಲೆಕ್ಟ್ರಿಕಲ್ ಮೆಕ್ಯಾನಿಕಲ್ ಇಂಜಿನಿಯರಿಂಗ್) ಹುದ್ದೆಗಳಿಗೆ ಭರ್ತಿ ಪ್ರಕ್ರಿಯೆ ನಡೆಯುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ಆಹಾರ ನಿಗಮದ ಅಧಿಕೃತ ವೆಬ್‌ಸೈಟ್ fci.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳು- 113
ಉತ್ತರ ವಲಯ: 38 ಹುದ್ದೆಗಳು
ಪೂರ್ವ ವಲಯ: 21

ಹುದ್ದೆಗಳು
ಈಶಾನ್ಯ ವಲಯ: 18

ಹುದ್ದೆಗಳು
ಅರ್ಹತಾ ಮಾನದಂಡ:
ಮ್ಯಾನೇಜರ್ (ಸಾಮಾನ್ಯ) ಹುದ್ದೆ: ಕನಿಷ್ಠ 60% ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ CA/ICWA/CS ಮಾಡಿರಬೇಕು. ಇನ್ನು SC/ST/ PwBD ಅಭ್ಯರ್ಥಿಗಳಿಗೆ ಕನಿಷ್ಠ ಅಂಕಗಳಲ್ಲಿ ವಿನಾಯಿತಿ ನೀಡಲಾಗಿದ್ದು, ಅದರಂತೆ 55% ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಮ್ಯಾನೇಜರ್ (ಡಿಪೋ) ಹುದ್ದೆ: ಕನಿಷ್ಠ 60% ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ CA/ICWA/CS ಮಾಡಿಬೇಕು. ಇನ್ನು 55% ಹೊಂದಿರುವ SC/ST/ PwBD ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 28 ವರ್ಷಗಳಿಗಿಂತ ಹೆಚ್ಚಿರಬಾರದು. ಇದಾಗ್ಯೂ ಕೆಲ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಅರ್ಹ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ಪರಿಶೀಲಿಸಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಶುಲ್ಕವಾಗಿ ರೂ 800 ಪಾವತಿಸಬೇಕಾಗುತ್ತದೆ. ಇನ್ನು SC / ST / PWBD ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಸೆಪ್ಟೆಂಬರ್ 26, 2022

ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಅಭ್ಯರ್ಥಿಗಳು Fci.gov.in ಮೂಲಕ ಆನ್‌ಲೈನ್‌ನಲ್ಲಿ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಮಾಡಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...