Wednesday, May 6, 2026
Wednesday, May 6, 2026

ಪ್ರಧಾನಿಯಿಂದ ಮಂಗಳೂರಿನಲ್ಲಿ₹3,800 ಕೋಟಿ ವೆಚ್ಚದ ಯೋಜನೆಗಳಲೋಕಾರ್ಪಣೆ

Date:

ಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಮಧ್ಯಾಹ್ನ 1.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ 3,800 ಕೋಟಿ ರೂ. ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಪ್ರಧಾನಿ ಲೋಕಾರ್ಪಣೆ ಮಾಡುವ ಯೋಜನೆಗಳಲ್ಲಿ, ಕಂಟೇನರ್‌ಗಳು ಹಾಗೂ ಇತರೆ ಸರಕು ನಿರ್ವಹಣೆಗಾಗಿ ಬರ್ತ್ ಸಂಖ್ಯೆ 14 ರ ಯಾಂತ್ರೀಕರಣ (ರೂ. 281 ಕೋಟಿ), ಬಿಎಸ್ VI ಉನ್ನತೀಕರಣ ಯೋಜನೆ (ರೂ. 1829 ಕೋಟಿ), ಸಮುದ್ರ ನೀರಿನ ನಿರ್ಲವಣೀಕರಣ ಘಟಕ (ರೂ. 677 ಕೋಟಿ) ಗಳು ಸೇರಿವೆ.

ಕುಳಾಯಿಯಲ್ಲಿ ಇಪಿಸಿ ಮಾದರಿಯಲ್ಲಿ ಮೀನುಗಾರಿಕಾ ಬಂದರು ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ನರೇಂದ್ರ ಮೋದಿ, ಎನ್‌ಎಂಪಿಟಿಯಲ್ಲಿ ಸಮಗ್ರ ಎಲ್ಪಿಜಿ ಹಾಗೂ ಬೃಹತ್ ಪಿಓಎಲ್ ಸೌಲಭ್ಯ (ಅಂದಾಜು ವೆಚ್ಚ ರೂ. 500 ಕೋಟಿ), ಶೇಖರಣಾ ಟ್ಯಾಂಕ್‌ ಗಳು ಹಾಗೂ ಖಾದ್ಯ ತೈಲ ಸಂಸ್ಕರಣಾಗಾರ ನಿರ್ಮಾಣ (ರೂ. 100 ಕೋಟಿ), ಬಿಟುಮಿನ್ ಶೇಖರಣಾ ಟ್ಯಾಂಕ್ ಘಟಕಗಳ ನಿರ್ಮಾಣ (ರೂ. 100 ಕೋಟಿ) ಹಾಗೂ ಬಿಟುಮಿನ್, ಖಾದ್ಯ ತೈಲ ಶೇಖರಣಾ ಟ್ಯಾಂಕ್‌ ಗಳು ಹಾಗೂ ಸಂಬಂಧಿತ ಸೌಲಭ್ಯಗಳ ನಿರ್ಮಾಣ (ರೂ. 100 ಕೋಟಿ) ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಷಿ, ಬಂದರು, ಹಡಗು ಮತ್ತು ಜಲಸಾರಿಗೆ ಹಾಗೂ ಆಯುಷ್ ಸಚಿವ ಸರ್ಬಾನಂದ್ ಸೋನೋವಾಲ್, ಇಂಧನ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ, ಬಂದರು, ಹಡಗು ಮತ್ತು ಜಲಸಾರಿಗೆ ರಾಜ್ಯ ಸಚಿವರಾದ ಶ್ರೀಪಾದ್ ಯೆಸ್ಸೋ ನಾಯಕ್ ಹಾಗೂ ಶಂತನು ಠಾಕೂರ್ ಉಪಸ್ಥಿತರಿರಲಿದ್ದಾರೆ ಎನ್ನಲಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...