Wednesday, May 6, 2026
Wednesday, May 6, 2026

ಬಸವರಾಜನ್ ಅವರನ್ನ ಮುರುಘಾಮಠದಕಾರ್ಯದರ್ಶಿ ಸ್ಥಾನದಿಂದ ವಜಾ ಮಾಡಲಾಗಿದೆ

Date:

ಷರತ್ತುಗಳನ್ನು ಉಲ್ಲಂಘಿಸಿ ಮಠ ಹಾಗೂ ಪೀಠಾಧಿಪತಿ ಘನತೆ, ಗೌರವಕ್ಕೆ ಧಕ್ಕೆ ತರಲು ಒಳಸಂಚು ರೂಪಿಸಿದ ಆರೋಪದ ಮೇರೆಗೆ ಮಾಜಿ ಶಾಸಕ ಎಸ್‌.ಕೆ.ಬಸವರಾಜನ್‌ ಅವರನ್ನು ಮುರುಘಾ ಮಠದ ಆಡಳಿತಾಧಿಕಾರಿ ಮತ್ತು ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಹುದ್ದೆಯಿಂದ ವಜಾ ಮಾಡಲಾಗಿದೆ.

ಮಾರ್ಚ್‌ 7ರಂದು ಅವರು ಈ ಹುದ್ದೆಗೆ ನೇಮಕಗೊಂಡಿದ್ದರು. ಈ ವೇಳೆ ಬಸವರಾಜನ್‌ ಅವರಿಗೆ 8ಕ್ಕೂ ಹೆಚ್ಚು ಷರತ್ತುಗಳನ್ನು ವಿಧಿಸಲಾಗಿತ್ತು. 2007ರಲ್ಲಿಯೂ ಇವರನ್ನು ಇದೇ ಹುದ್ದೆಯಿಂದ ಕಿತ್ತುಹಾಕಲಾಗಿತ್ತು.
‘ಲಿಂಗಾಯತ-ವೀರಶೈವ ಮತ್ತು ವಿವಿಧ ಸಮಾಜಗಳ ಮುಖಂಡರ ಒತ್ತಾಸೆಯಂತೆ ಬಸವರಾಜನ್‌ ಅವರನ್ನು ಮಾರ್ಚ್‌ 7ರಂದು ಪುನರ್‌ ನೇಮಕಾತಿ ಮಾಡಿಕೊಳ್ಳಲಾಗಿತ್ತು. ಮಠ ಮತ್ತು ಬಸವರಾಜನ್‌ ಅವರ ನಡುವಿನ ವ್ಯಾಜ್ಯಗಳನ್ನು ಮುಕ್ತಾಯಗೊಳಿಸುವುದು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಲಾಗಿತ್ತು.

ಬಸವರಾಜನ್‌ ಅವರು ಆಡಳಿತಾತ್ಮಕವಾಗಿ ಯಾವುದೇ ರೀತಿಯ ಸಹಕಾರ ನೀಡುತ್ತಿರಲಿಲ್ಲ. ಮಠದ ಪರವಾಗಿ ಬಸವರಾಜನ್ ಅವರ ಹೆಸರಿನಲ್ಲಿ ಖರೀದಿಸಿದ ಆಸ್ತಿಗಳನ್ನು ಹಿಂದಿರುಗಿಸದೇ ಸಮಸ್ಯೆ ಸೃಷ್ಟಿಸಿದರು. ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಅಮೆರಿಕ ಮತ್ತು ಮಾರಿಷಸ್ ಪ್ರವಾಸಗಳಲ್ಲಿರುವಾಗ ಮಠದ ವಿರೋಧಿ ಕೃತ್ಯದಲ್ಲಿ ತೊಡಗಿದರು. ಪೀಠಾಧ್ಯಕ್ಷರು ಹಲವು ಬಾರಿ ಸೂಚನೆ ನೀಡಿದರೂ ತಪ್ಪು ತಿದ್ದಿಕೊಳ್ಳಲಿಲ್ಲ’ ಎಂದು ಮಾಹಿತಿ ನೀಡಲಾಗಿದೆ.

ಮೊದಲ ಹೆಜ್ಜೆಯಾಗಿ ನಗರದ ಕಾವೇರಿ ಸ್ಟೋರ‍್ಸ್‌ಗೆ ಸಂಬಂಧಿಸಿದ ವ್ಯಾಜ್ಯವನ್ನು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ರಾಜಿಯೊಂದಿಗೆ ಇತ್ಯರ್ಥಗೊಳಿಸಿಕೊಳ್ಳಲಾಗಿತ್ತು. ಆದರೆ, ಆನಂತದ ಅವರ ನಡೆಗಳು ಅನುಮಾಸ್ಪದವಾಗಿದ್ದವು’ ಎಂದು ಮಠ ಆರೋಪಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...