Friday, March 20, 2026
Friday, March 20, 2026

ಮುರುಘಾಶ್ರೀಗಳ ಬಂಧನ:ಮಕ್ಕಳ ಮಾಹಿತಿ ಸಿಗದೇ ಪೋಷಕರು ಕಂಗಾಲು

Date:

ಮುರುಘಾಮಠದ ಶ್ರೀಗಳಾದ
ಶಿವಮೂರ್ತಿ ಶರಣರನ್ನು ಪೊಲೀಸರು ಬಂಧಿಸಿದ್ದಾರೆ. ಅವರ ಮೇಲೆ ಪೋಕ್ಸ್‌ ಪ್ರಕರಣ ದಾಖಲಾಗಿ ಸತತ ಆರು ದಿನಗಳ ಬಳಿಕ ಪೊಲೀಸರು ಮುರುಘಾ ಶರಣರನ್ನು ಬಂಧಿಸಿದ್ದಾರೆ.

ಇನ್ನು, -ಶ್ರೀಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ನ್ಯಾಯಧೀಶರು ಆದೇಶ ನೀಡುತ್ತಿದ್ದಂತೆ ಮುರುಘಾ ಶ್ರೀಗಳನ್ನ ಬಿಗಿ ಪೊಲೀಸರ ಭದ್ರತೆಯೊಂದಿಗೆ ಚಿತ್ರದುರ್ಗ ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ.

ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಶ್ರೀಗಳು ನಿದ್ದೆಯಿಲ್ಲದೆ ರಾತ್ರಿ ಪೂರ್ತಿ ಕಳೆದಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ರಾತ್ರಿ ಮೂರು ಗಂಟೆ ಸುಮಾರಿಗೆ
ಶ್ರೀಗಳನ್ನ ಕೇಂದ್ರ ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿತ್ತು. ಆ ನಂತರ ಶ್ರೀಗಳು ನಿದ್ದೆಗೆ ಜಾರಿಲ್ಲ ರಾತ್ರಿಯಿಂದಲೂ ಬೇಸರದಲ್ಲೇ ಶ್ರೀಗಳು ಸಮಯವನ್ನು ಕಳೆದಿದ್ದಾರೆ ಈ ರೀತಿ ಆಯ್ತಲ್ಲ ಅಂತ ನೊಂದುಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸ್ವಾಮೀಜಿಯವರು ಲೈಂಗಿಕ ದೌರ್ಜನ್ಯ ನೀಡಿದ್ದಾರೆ ಎಂದು ಆರೋಪಿಸಿ ಸಂತ್ರಸ್ತ ಬಾಲಕಿಯರು ಒಡನಾಡಿ ಸಂಸ್ಥೆಯ ಮೂಲಕ ದೂರು ನೀಡಿದ್ದರು. ಒಡನಾಡಿ ಸಂಸ್ಥೆಯ ನೆರವು ಪಡೆದು ಬಾಲಕಿಯರು ಆಗಸ್ಟ್ 26ರಂದು ಮೈಸೂರಿನಲ್ಲಿ ಕೇಸ್ ದಾಖಲು ಮಾಡಿದ್ದರು. ನಂತರ ಈ ಪ್ರಕರಣವನ್ನು ಚಿತ್ರದುರ್ಗಕ್ಕೆ ವರ್ಗಾಯಿಸಲಾಯಿತು. ಶ್ರೀಗಳ ಬಂಧನಕ್ಕೆ ಒತ್ತಾಯಿಸಿ ಹಲವು ಪ್ರತಿಭಟನೆ ಹಾಗೂ ಒತ್ತಡದಿಂದಾಗಿ ಪೊಲೀಸರು ಶ್ರೀಗಳನ್ನು ಬಂಧಿಸಿದ್ದಾರೆ.

ಸಿಪಿಐ ಬಾಲಚಂದ್ರ ನಾಯಕ್ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತದೆ ಎಂದು ಹೇಳಲಾಗುತ್ತಿದೆ.

ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಮುರುಘಾ ಮಠದ ಹಾಸ್ಟೆಲ್ ನಲ್ಲಿ ಓದುತ್ತಿರುವ ಮಕ್ಕಳನ್ನು ಸಂಪರ್ಕಿಸಲು ಪೋಷಕರು ಪ್ರಯತ್ನ ನಡೆಸಿದ್ದಾರೆ.ಆದರೆ ಸೂಕ್ತ ಮಾಹಿತಿ ಇಲ್ಲದೇ ಕಂಗಾಲಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...