Sunday, August 23, 2026
Sunday, August 23, 2026

15 ನೇ ಹಣಕಾಸು ಯೋಜನೆಯಡಿ ಕೇಂದ್ರದಿಂದ ರಾಜ್ಯಕ್ಕೆ ₹ 1046.78 ಕೋಟಿ ಬಿಡುಗಡೆ

Date:

ಕರ್ನಾಟಕ ಸೇರಿ ದೇಶದ ಎಲ್ಲಾ ರಾಜ್ಯಗಳಿಗೂ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕರ್ನಾಟಕ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ 1,046.78 ಕೋಟಿ ಹಣ ಬಿಡುಗಡೆ ಮಾಡಿದೆ.

ಪ್ರಸಕ್ತ ಹಣಕಾಸು ವರ್ಷದ 2022-23ರ 15ನೇ ಹಣಕಾಸು ಆಯೋಗದ ಶಿಫಾರಸುಗಳ ಪ್ರಕಾರ, ಕೇಂದ್ರ ಸರ್ಕಾರವು ಎಲ್ಲಾ ರಾಜ್ಯಗಳಿಗೆ ಹಳ್ಳಿಗಳಲ್ಲಿ ಕುಡಿಯುವ ನೀರು ಸರಬರಾಜು, ನೈರ್ಮಲ್ಯ ಹಾಗೂ ನೈರ್ಮಲ್ಯದ ಸುಧಾರಣೆಗೆ ಹಣವನ್ನು ಬಿಡುಗಡೆ ಮಾಡಿದೆ.

ಅದರಂತೆ, ಕೇಂದ್ರ ಹಣಕಾಸು ಸಚಿವಾಲಯವು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಅನುದಾನದ ಅಡಿಯಲ್ಲಿ ಹಣವನ್ನು ಬಿಡುಗಡೆ ಮಾಡುವ ಆದೇಶವನ್ನ ಹೊರಡಿಸಿದೆ. ಎಲ್ಲಾ ರಾಜ್ಯಗಳಿಗೆ ಒಟ್ಟು 15,705.65 ಕೋಟಿ ಬಿಡುಗಡೆಯಾಗಿದೆ. ಇದರಲ್ಲಿ ಬಿಹಾರಕ್ಕೆ 1,921 ಕೋಟಿ, ಛತ್ತೀಸ್‌ಗಢಕ್ಕೆ 557 ಕೋಟಿ, ಗುಜರಾತ್‌ಗೆ 1,181 ಕೋಟಿ ಮತ್ತು ಹಿಮಾಚಲ ಪ್ರದೇಶಕ್ಕೆ 1,181 ಕೋಟಿಗಳನ್ನ ಬಿಡುಗಡೆ ಮಾಡಲಾಗಿದೆ. 224.30 ಕೋಟಿ, ಜಾರ್ಖಂಡ್ 249.80 ಕೋಟಿ, ಕರ್ನಾಟಕ 1,046.78 ಕೋಟಿ, ಕೇರಳ 623 ಕೋಟಿ, ಮಧ್ಯಪ್ರದೇಶ 1,472 ಕೋಟಿ, ಮಹಾರಾಷ್ಟ್ರ 1,092.92 ಕೋಟಿ, ಮೇಘಾಲಯ 40.50 ಕೋಟಿ, ನಾಗಾಲಾಡ್ 18.40 ಕೋಟಿ, ಒಡಿಶಾ 864 ಕೋಟಿ, ತಮಿಳುನಾಡು 1,380.50 ಕೋಟಿ, ತೆಲಂಗಾಣಕ್ಕೆ 273 ಕೋಟಿ, ತ್ರಿಪುರಾಕ್ಕೆ 73.50 ಕೋಟಿ ಮತ್ತು ಉತ್ತರ ಪ್ರದೇಶಕ್ಕೆ 3,733 ಕೋಟಿಗಳನ್ನ ನರೇಂದ್ರ ಮೋದಿ ಸರ್ಕಾರ ಬಿಡುಗಡೆ ಮಾಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...