Sunday, March 22, 2026
Sunday, March 22, 2026

ಜೆಡಿಎಸ್ ಗೆ 85 ರಿಂದ 90 ಸ್ಥಾನ ಗೆಲ್ಲಲಿದೆ- ಕುಮಾರಣ್ಣ

Date:

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ 85ರಿಂದ 90 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಾಗಮಂಗಲ ತಾಲೂಕಿನ ಚಿಕ್ಕಜಕ್ಕನಹಳ್ಳಿ ಗ್ರಾಮದಲ್ಲಿ ಪಕ್ಷದ ಮುಖಂಡರೊಬ್ಬರ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,

ದೇಶ ಮತ್ತು ರಾಜ್ಯದಲ್ಲಿ ಜನವಿರೋಧಿ ಸರಕಾರಗಳು ಅಧಿಕಾರ ನಡೆಸುತ್ತಿವೆ. ಜನರು ಸಂಕಷ್ಟಗಳನ್ನು ಸರಕಾರಗಳು ಕೇಳುತ್ತಿಲ್ಲ. ಹಾಗಾಗಿ ಜನಪರ, ಜನರ ಸಂಕಷ್ಟಗಳಿಗೆ ಸ್ಪಂದಿಸುವ ಸರಕಾರ ಬರಲು ಜೆಡಿಎಸ್‍ಗೆ ಮತ ಹಾಕಬೇಕು ಎಂದು ಅವರು ಮನವಿ ಮಾಡಿದರು.

ಜೆಡಿಎಸ್ ಸರಕಾರದ ಅಗತ್ಯವಿದೆ ಎಂದು ರಾಜ್ಯದಲ್ಲಿ ಜನತೆ ಚರ್ಚಿಸುತ್ತಿದ್ದಾರೆ.
ನಾವು ಹಿಂದಿನ ಚುನಾವಣೆಯಲ್ಲಿ ಜೆಡಿಎಸ್‍ಗೆ ಮತ ಹಾಕದೆ ತಪ್ಪು ಮಾಡಿದ್ದೇವೆ. ಈ ಚುನಾವಣೆಯಲ್ಲಿ ಜೆಡಿಎಸ್ ಸರಕಾರ ತರಬೇಕು ಎಂದು ಜನರು ಮಾತನಾಡಿಕೊಳ್ಳುತ್ತಿರುವುದು ಗಮನಕ್ಕೆ ಬಂದಿದೆ ಎಂದು ಅವರು ಹೇಳಿದರು.

ಮೋದಿ ಗೊಂಬೆ ಕುಣಿಸಲು ಬರುತ್ತಾರ?: ಪ್ರಧಾನಿ ನರೇಂದ್ರ ಮೋದಿ ತಿಂಗಳಿಗೊಮ್ಮೆ ರಾಜ್ಯಕ್ಕೆ ಏಕೆ ಬರುತ್ತಾರೆ? ಇಲ್ಲಿ ಗೊಂಬೆ ಕುಣಿಸಲು ಬರುತ್ತಾರ? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಧಾನಿ ನರೇಂದ್ರಮೋದಿ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಕಳೆದ ಮೂರು ವರ್ಷದಲ್ಲಿ ಸುಮಾರು 30ರಿಂದ 40 ಸಾವಿರ ಕೋಟಿ ಬೆಳೆ ನಷ್ಟವಾಗಿದೆ. ಮೂಲ ಸೌಕರ್ಯಕ್ಕೆ ಹಾನಿಯಾಗಿದೆ. ಕೇಂದ್ರ ಸರಕಾರ ಯಾವುದೇ ಅನುದಾನ ನೀಡಿಲ್ಲ.ಇನ್ನೇಕೆ ರಾಜ್ಯಕ್ಕೆ ಮೋದಿ ಪದೇ ಪದೇ ಭೇಟಿ ನೀಡುತ್ತಾರೆ? ಎಂದು ತರಾಟೆಗೆ ತೆಗೆದುಕೊಂಡರು.
ರಾಜ್ಯದ ಜನತೆ ತೀವ್ರ ಸಂಕಷ್ಟದಲ್ಲಿದ್ದಾರೆ. ಕೇಂದ್ರದಿಂದ ಯಾವುದೇ ನೆರವು ದೊರೆಯುತ್ತಿಲ್ಲ. ಮೋದಿ ಅವರು ಕರ್ನಾಟಕ ರಾಜ್ಯಕ್ಕೆ ಏನು ನೆರವು ಕೊಟ್ಟಿದ್ದೀವಿ ಎಂದು ಬರುತ್ತಾರೆ? ಜನರ ಸಮಸ್ಯೆಗೆ ಏನು ಮಾಡಿದ್ದೇನೆಂದು ಬರುತ್ತಾರೆ? ಕೇವಲ ಭಾಷಣ ಬಿಗಿಯಲು ಬರುತ್ತಾರ? ಎಂದು ಅವರು ಕಿಡಿಕಾರಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ripponpet News ಪೆಟ್ರೋಲ್ ಕೊರತೆ ಎಂಬ ಸುದ್ದಿ ನಂಬಿ ರಿಪ್ಪನ್ ಪೇಟೆಯ ‘ಬಂಕ್’ ಗಳಿಗೆ ಮುಗಿಬಿದ್ದ ಜನ.

Ripponpet News ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿರುವ ಹೆಚ್‌ಪಿ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್...

Yakshagana ಶಿವಮೊಗ್ಗದ ವರದಾ ಐತಾಳ್ ಅವರಿಗೆ ಶಿವರಾಮ ಕಾರಂತ ಪ್ರತಿಷ್ಠಾನದಿಂದ “ಸಾಧಕಿ ಪ್ರಶಸ್ತಿ” ಪುರಸ್ಕಾರ.

Yakshagana ತಾll 15.03.2026 ರಂದು ಯಕ್ಷಗಾನ ದಲ್ಲಿ ಹೊಸಸಾಧ್ಯತೆಯ ಅನಾವರಣಕ್ಕಾಗಿ ಡಾllಶಿವರಾಮ...

Ramadan ಸಮಾಜದಲ್ಲಿ ಶಾಂತಿ – ಸೌಹಾರ್ದದಿಂದ ಬಾಳಬೇಕು- ಮೌಲಾನಾ ಮುಫ್ತಿ ತಪ್ಜಿಲ್ ಆಲಂ ಖಾಸ್ಮಿ

Ramadan ತಿಂಗಳು ಪೂರ್ತಿ ಉಪವಾಸ ವ್ರತ ಆಚರಣೆಯ ನಂತರ ಮುಸ್ಲಿಂ ಬಾಂಧವರು...

Chess ಮಾರ್ಚ್ 25 ರಿಂದ ಶಿವಮೊಗ್ಗದಲ್ಲಿ ಬೇಸಿಗೆ ರಜೆ ನಿಮಿತ್ತ ಚೆಸ್ ತರಬೇತಿ ಶಿಬಿರ.

Chess ಶಿವಮೊಗ್ಗ ನಗರದ ಯಾದವ ಸ್ಕೂಲ್ ಆಫ್ ಚೆಸ್ ಸಂಸ್ಥೆಯಿಂದ ಈ...