Wednesday, September 16, 2026
Wednesday, September 16, 2026

ಆಟೋ ಚಾಲಕ ಆರಂಭಿಸಿದ ಬಿಂದುಅಂಬಾನಿ ಚಿತ್ತಸೆಳೆದಿದೆ

Date:

ಉದ್ಯಮ ಕ್ಷೇತ್ರದ ಪ್ರಸಿದ್ಧ ರಿಲಯನ್ಸ್ ಕಂಪನಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ತಂಪು ಪಾನಿಯ ಸಂಸ್ಥೆಯ ಮೇಲೆ ಕಣ್ಣು ಹಾಕಿದೆ. ಪುತ್ತೂರಿನ ಸಣ್ಣ ಗ್ರಾಮದಲ್ಲಿ ಆರಂಭವಾದ ಸಣ್ಣ ಉದ್ಯಮ, ಏಷ್ಯಾದ ಅತೀ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಮುಖೇಶ್ ಅಂಬಾನಿಯ ರಿಲಯನ್ಸ್ ಕಣ್ಣಿಗೆ ಬಿದ್ದಿದ್ದು,ಬಹುಕೋಟಿ ಆಫರ್ ಕೂಡಾ ಮಾಡಿದೆ.

ಆದರೆ ಪುತ್ತೂರಿನ ಕಂಪನಿ ಮಾತ್ರ ಅಂಬಾನಿಯ ಆಫರ್ ಅನ್ನು ತಿರಸ್ಕರಿಸಿದೆ. ಕಂಪನಿ ಬೆಳೆಸುವ ಉದ್ದೇಶ ವ್ಯಕ್ತಪಡಿಸಿದೆ. ಮಾರಾಟ ಮಾಡುವ ಉದ್ದೇಶವಿಲ್ಲವೆಂದು ನೇರವಾಗಿ ಹೇಳಿದೆ.

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಮೂಲದ ‘ಬಿಂದು’ ಬ್ರ್ಯಾಂಡ್ ಖ್ಯಾತಿಯ ಎಸ್ ಜಿ ಕಂಪನಿಯ ಮೆಗಾ ಫ್ರೂಟ್ ಪ್ರೊಸೆಸಿಂಗ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಮೇಲೆ ಸದ್ಯ ರಿಯಾಲನ್ಸ್ ಕಣ್ಣು ಹಾಕಿದೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಎಸ್ ಜಿ ಕಾರ್ಪೋರೇಟ್ಸ್ ಆಡಳಿತ ನಿರ್ದೇಶಕ ಸತ್ಯ ಶಂಕರ್, ಈ ಹಿಂದೆಯೂ ವಿಪ್ರೋ, ಕೋಕೋ ಕೋಲಾ ಸೇರಿದಂತೆ ಹಲವಾರು ಅಂತಾರಾಷ್ಟ್ರೀಯ ಕಂಪನಿಗಳು ನಮ್ಮ ಕಂಪನಿ ಖರೀದಿಗೆ ಆಸಕ್ತಿ ತೋರಿಸಿದ್ದವು.

ಈಗ ರಿಲಯನ್ಸ್ ಕಂಪೆನಿ ಕೂಡಾ ದೊಡ್ಡ ಆಫರ್ ನೀಡಿದೆ. ಉದ್ಯಮ ವಲಯದಲ್ಲಿ ಇದೆಲ್ಲಾ ಸಾಮಾನ್ಯವಾಗಿರುವ ವಿಷಯ. ಆದರೆ ನಾವು ಯಾವುದೇ ಕಾರಣಕ್ಕೂ ಕಂಪೆನಿ ಮಾರಾಟ ಮಾಡುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...