Sunday, August 2, 2026
Sunday, August 2, 2026

ಮನಮೋಹಕ ಸಿಹಿಮೊಗೆ ಪರಿಸರಕೈ ಬೀಸಿ ಕರೆಯುತಿದೆ

Date:

ನಮ್ಮ ಕರ್ನಾಟಕದ ಸುಂದರ ಸ್ಥಳಗಳಲ್ಲೊಂದು ಶಿವಮೊಗ್ಗ. ಇಲ್ಲಿನ ನೈಸರ್ಗಿಕ ಚೆಲುವು ನೋಡುಗರನ್ನು ಕೈ ಬೀಸಿ ಕರೆಯುತ್ತದೆ. ಶಿವಮೊಗ್ಗ ‘ಗೇಟ್ ವೇ ಟು ಮಲ್ನಾಡ್’ ಎಂದೇ ಪ್ರಸಿದ್ಧ.

ಇದರ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಬರುತ್ತಾರೆ. ಈ ಸುಂದರ ತಾಣದ ಪ್ರಮುಖ ಪ್ರವಾಸಿ ತಾಣಗಳು ಹೀಗಿವೆ.

ಹೊನ್ನೆಮರಡು
ಇದು ಶಿವಮೊಗ್ಗ ಜಿಲ್ಲೆಯಲ್ಲಿರುವ ಒಂದು ಚಿಕ್ಕ ಊರು. ಇದರ ನಿಸರ್ಗ ಸೌಂದರ್ಯವನ್ನು ಸವಿಯಲು ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಇದು ಪಕ್ಷಿ ಪ್ರಿಯರ ಸ್ವರ್ಗ.

ಕುಂದಾದ್ರಿ
ಸಮುದ್ರ ತೀರದಿಂದ 3,200 ಅಡಿ ಎತ್ತರದಲ್ಲಿರುವ ಕಲ್ಲು ಇಲ್ಲಿಯ ಪ್ರಮುಖ ಆಕರ್ಷಣೆ. ಇಲ್ಲೊಂದು ಅತ್ಯಾಕರ್ಷಕ ಜೈನ ದೇವಾಲಯವಿದ್ದು, ಇದನ್ನು 17ನೇ ಶತಮಾನದಲ್ಲಿ ಕಟ್ಟಲಾಗಿದೆ ಎಂದು ಹೇಳಲಾಗುತ್ತದೆ.

ಕೊಡಚಾದ್ರಿ‌
ಕೊಡಚಾದ್ರಿ ಕರ್ನಾಟಕದ ಹತ್ತನೇ ಅತಿ ಎತ್ತರದ ಶಿಖರ. ಇದು ಟ್ರಕ್ಕಿಂಗ್ ಗೆ ಫೇಮಸ್ ಆಗಿದೆ.

ಜೋಗ ಜಲಪಾತ
ಅತೀ ಎತ್ತರದಿಂದ ಧುಮ್ಮಿಕ್ಕುವ ಜೋಗ ಜಲಪಾತದ ಸೌಂದರ್ಯವನ್ನು ನೋಡುವುದೇ ಚೆಂದ. ರಾಜ, ರಾಣಿ, ರಾಕೆಟ್ ಮತ್ತು ರೋರರ್ ನಾಲ್ಕು ದಿಕ್ಕುಗಳಿಂದ ಧುಮ್ಮಿಕ್ಕುತ್ತಿರುವ ಆ ಚೆಲುವನ್ನು ನೋಡಲು ಕಣ್ಣುಗಳೇ ಸಾಲದು.

ಸಕ್ಕರೆಬೈಲು
ಇದೊಂದು ಆನೆ ಕ್ಯಾಂಪ್ ಆಗಿದ್ದು, ಇಲ್ಲಿಗೆ ಬಹಳಷ್ಟು ಪ್ರವಾಸಿಗರು ಭೇಟಿ ನೀಡುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...