Wednesday, May 6, 2026
Wednesday, May 6, 2026

ತರಗತಿ ಪ್ರವೇಶಕ್ಕೆ ಹಿಜಾಬ್ ಅಗತ್ಯವೆ? ಸುಪ್ರೀಂ ಪ್ರಶ್ನೆ

Date:

ಒಬ್ಬ ವ್ಯಕ್ತಿಗೆ ಧಾರ್ಮಿಕ ಸಂಪ್ರದಾಯಗಳನ್ನು ಪಾಲಿಸುವ, ಆಚರಿಸುವ ಹಕ್ಕು ಇದೆ, ಆದರೆ ಸಮವಸ್ತ್ರ ಧರಿಸುವ ಶಾಲೆಯವರೆಗೆ ಅದನ್ನು ತೆಗೆದುಕೊಂಡು ಹೋಗುವ ಔಚಿತ್ಯವನ್ನು ಸುಪ್ರೀಂ ಕೋರ್ಟ್ ಕರ್ನಾಟಕದಲ್ಲಿ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಕುರಿತ ವಿಚಾರಣೆ ವೇಳೆ ಪ್ರಶ್ನಿಸಿದೆ.

ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದಕ್ಕೆ ನಿಷೇಧ ಹೇರಿ ರಾಜ್ಯ ಸರ್ಕಾರ ಹೊರಡಿಸಿದ್ದ ನಿಯಮವನ್ನು ಪುರಸ್ಕರಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಲಾಗಿರುವ ಅರ್ಜಿಗಳ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ರೀತಿ ಪ್ರಶ್ನಿಸಿದೆ.

ಸಮವಸ್ತ್ರ ಧರಿಸುವ ಶಾಲೆಯಲ್ಲಿ ಹಿಜಾಬ್ ಏಕೆ ಎಂದು ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ ಪ್ರಶ್ನಿಸಿದೆ.
ನಿಮ್ಮನಿಮ್ಮ ಧಾರ್ಮಿಕ ಸಂಪ್ರದಾಯಗಳನ್ನು ಆಚರಿಸುವ ಹಕ್ಕು ನಿಮಗಿದೆ. ಆದರೆ ನೀವು ಧರಿಸಬೇಕಾದ ಉಡುಪಿನ ಭಾಗವಾಗಿ ಸಮವಸ್ತ್ರವನ್ನು ಹೊಂದಿರುವ ಶಾಲೆಗೆ ನಿಮ್ಮ ಧಾರ್ಮಿಕ ಸಂಪ್ರದಾಯಗಳನ್ನು ತೆಗೆದುಕೊಂಡು ಹೋಗಬಹುದೇ ಎಂಬುದು ಪ್ರಶ್ನೆ ಎಂದು ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ನೇತೃತ್ವದ ನ್ಯಾಯಪೀಠ ಕೇಳಿದೆ.

ಕೆಲವು ಅರ್ಜಿದಾರರ ಪರ ವಾದ ಮಂಡಿಸುತ್ತಿದ್ದ ಹಿರಿಯ ವಕೀಲ ಸಂಜಯ್ ಹೆಗ್ಡೆ ಅವರಿಗೆ ಸುಪ್ರೀಂ ಕೋರ್ಟ್ ಈ ಪ್ರಶ್ನೆಯನ್ನು ಕೇಳಿದೆ.

ನಿರ್ದಿಷ್ಟ ಅಧಿಕಾರವಿಲ್ಲದಿದ್ದರೆ, 161 ನೇ ವಿಧಿ ಅನ್ವಯವಾಗುತ್ತದೆ, ಸಮವಸ್ತ್ರವನ್ನು ಸೂಚಿಸುವ ಅಧಿಕಾರವಿಲ್ಲದಿದ್ದರೆ, ಹುಡುಗಿಯರು ಮಿಡಿ ಮಿನಿಸ್ಕರ್ಟ್‌ಗಳು ಏನು ಬೇಕಾದರೂ ಬರಬಹುದೇ ಯಾವುದೇ ನಿಯಮಗಳು ಜಾರಿಯಿಲ್ಲದಿದ್ದರೆ, ರಾಜ್ಯದ ಕಾರ್ಯನಿರ್ವಾಹಕ ಅಧಿಕಾರವು ಕಾರ್ಯರೂಪಕ್ಕೆ ಬರುತ್ತದೆ.

ಹೈಕೋರ್ಟ್ ಹೇಳಿದ್ದನ್ನು ನಾವು ಪಾಲಿಸಬೇಕಾಗಿಲ್ಲ. ಕಾಯ್ದೆಯು ಯಾವುದೇ ಡ್ರೆಸ್ ಕೋಡ್ ನ್ನು ನಿಷೇಧಿಸದಿದ್ದರೆ ಅಥವಾ ಸೂಚಿಸದಿದ್ದರೆ, ರಾಜ್ಯ ಸರ್ಕಾರದ ಕಾರ್ಯನಿರ್ವಾಹಕ ಅಧಿಕಾರ ಬರುತ್ತದೆಯೇ ಅಥವಾ ಇಲ್ಲವೇ ಎಂದು ನ್ಯಾಯಪೀಠ ಕೇಳಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...

MESCOM ಮೇ 7 ಮತ್ತು 8 ರಂದು ಶಿವಮೊಗ್ಗದ ಅಚ್ಯುತ್ ರಾವ್ ಲೇಔಟ್,ಜೈಲ್ ರಸ್ತೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...