Friday, December 5, 2025
Friday, December 5, 2025

ಕಲಾವಿದೆ ಮಂಜಮ್ಮ ಜೋಗಿತಿ ಸೇರಿದಂತೆ ಐವರಿಗೆಗೌರವ ಡಾಕ್ಟರೇಟ್

Date:

ಕಲಬುರಗಿ ನಗರದ ಪ್ರತಿಷ್ಠಿತ ಶರಣಬಸವ ವಿಶ್ವವಿದ್ಯಾಲಯದಿಂದ ಮಂಜಮ್ಮ‌ ಜೋಗತಿ ಸೇರಿ ಐವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ‌ ಮಾಡಲಾಗುತ್ತಿದೆ ಎಂದು ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಶರಣಬಸವಪ್ಪ ಅಪ್ಪ ತಿಳಿಸಿದರು.

ಹಿರಿಯ ವಿಜ್ಞಾನಿಗಳಾದ ಡಾ.ಕಿರಣ್ ಕುಮಾರ್, ಡಾ.ಸತೀಶ್ ರೆಡ್ಡಿ, ಸಾಮಾಜಿಕ ಕಾರ್ಯಕರ್ತೆ ಹಾಗೂ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಪದ್ಮಶ್ರೀ ಡಾ ಮಂಜಮ್ಮ ಜೋಗತಿ, ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಿಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಕರ್ನಾಟಕದ ಹರಿಹರದ ಶಿವಯೋಗಾಶ್ರಮದ ಶರಣಬಸವಲಿಂಗ ಶಿವಯೋಗಿಗಳಿಗೆ ಮತ್ತು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಾಜಿ ಅಧ್ಯಕ್ಷ ದಿ.ಬಸವರಾಜಪ್ಪ ಅಪ್ಪ(ಮರಣೋತ್ತರ) ಅವರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಲಾಗಿದೆ ಎಂದು ಕುಲಾಧಿಪತಿ ತಿಳಿಸಿದರು.

ವಿವಿಯ 3ನೇ ಮತ್ತು 4ನೇ ಘಟಿಕೋತ್ಸವ ಸಂದರ್ಭದಲ್ಲಿ‌ ಡಾಕ್ಟರೇಟ್ ಪ್ರದಾನ ಮಾಡಲಾಗುವುದು.

ಇದಲ್ಲದೆ ಹಿರಿಯ ಪ್ರಾಧ್ಯಾಪಕ ಡಾ.ಎಸ್.ಜಿ.ಡೊಳ್ಳೇಗೌಡರಿಗೆ ಡಿ.ಲಿಟ್ ಪ್ರಶಸ್ತಿ ಹಾಗೂ 2,382 ವಿದ್ಯಾರ್ಥಿಗಳಿಗೆ ಪದವಿ, 337 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಗೌರವಿಸುವುದಾಗಿಯೂ ಅವರು ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...