ಶಿವಮೊಗ್ಗ ನಗರದ ಪ್ರಿಯಾಂಕ ಲೇಔಟ್ ನಲ್ಲಿ ತಡರಾತ್ರಿ ಕೊಲೆ ನಡೆದಿದೆ.
ನಿನ್ನೆ ತಡರಾತ್ರಿ ಗಂಡ-ಹೆಂಡತಿ ನಡುವೆ ಗಲಾಟೆ ನಡೆದಿದೆ.ಈ ಹಿನ್ನೆಲೆಯಲ್ಲಿ ಪತಿ ತನ್ನ ಪತ್ನಿಯ ಕುತ್ತಿಗೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.
ಮಂಜುಳಾ(35) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ.
ಬಳಿಕ ಪತಿ ತನ್ನ ಕೈ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಗಂಭೀರವಾಗಿ ಗಾಯಗೊಂಡಿರುವ ಪತಿ ದಿನೇಶ್ (42) ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದಲಾಗಿದೆ.
ತುಂಗಾನಗರ ಪೊಲೀಸ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಮನೆಯಲ್ಲಿ ಖುಷಿ (12) ಮತ್ತು ಮನ್ವಿತಾ (9) ಇಬ್ಬರು ಮಕ್ಕಳು ಮಲಗಿದ ವೇಳೆ ಈ ಘಟನೆ ಸಂಭವಿಸಿದೆ.
ದಿನೇಶಾ ಮೆಸ್ಕಾಂನಲ್ಲಿ ಹಿರಿಯ ಸಹಾಯಕ ಅಧಿಕಾರಿ ಆಗಿ ಸೇವೆ ಸಲ್ಲಿಸುತ್ತಿದ್ದರು.