ಶಿವಮೊಗ್ಗದ ಹೊಳೆ ಬಸ್ ಸ್ಟಾಪ್ ಹತ್ತಿರ ಬೈಕ್ ಹಾಗೂ ಸಿಟಿ ಬಸ್ ಮುಖಾ ಮುಖಿ ಡಿಕ್ಕಿ ಹೊಡೆದ ಹಿನ್ನಲೆಯಲ್ಲಿ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ.
ತುಂಗಾ ನದಿ ಹೊಸ ಸೇತುವೆ ಮೇಲೆ ಘಟನೆ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಳೆ ಬಿಸ್ ಸ್ಟಾಪ್ ಕಡೆಯಿಂದ ಪಲ್ಸರ್ ಬೈಕಿನಲ್ಲಿ ತೆರಳುತ್ತಿದ್ದ ಯುವಕರು, ಎದುರುಗಡೆಯಿಂದ ಬರುತ್ತಿದ್ದ ಸಿಟಿ ಬಸ್ಸಿಗೆ ಡಿಕ್ಕಿ ಹೊಡೆದಿದ್ದಾರೆ.
ಈ ಘಟನೆಯಲ್ಲಿ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಬೈಕ್ ಸವಾರರು ಮೂಲತಃ ಚಿಕ್ಕಲ್ ಐಡಾವಣೆಗೆ ಸೇರಿದವರು ಎಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಬೈಕಿನ ಮುಂಭಾಗ ಸಂಪೂರ್ಣವಾಗಿ ಜಜ್ಜಿ ಹೋಗಿದೆ. ಬಸ್ಸಿನ ಮುಂಭಾಗಕ್ಕೂ ಹಾನಿಯಾಗಿದೆ. ಅಪಘಾತ ನಡೆಯುತ್ತಿದ್ದಂತಯೇ, ತುಂಗಾ ನದಿ ಹೊಸ ಸೇತುವೆ ಮೇಲೆ ಜನಸಂದಣಿ ಉಂಟಾಗಿದೆ. ಇದರಿಂದ ಟ್ರಾಫಿಕ್ ಜಾಮ್ ಕೂಡ ಉಂಟಾಗಿರುವುದು ಈ ಸಂದರ್ಭದಲ್ಲಿ ಕಂಡುಬಂದಿದೆ.