Thursday, August 13, 2026
Thursday, August 13, 2026

ಮೊಬೈಲ್ ಚಟ ಬಿಡು ಎಂದ ಪೋಷಕರ ಮಾತಿಗೆ ಜೀವವನ್ನೇ ಬಿಟ್ಟ ಮಗ

Date:

ಅತಿಯಾಗಿ ಮೊಬೈಲ್ ಬಳಸಬೇಡ ಎಂದು ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಭದ್ರಾವತಿಯ ಎಚ್.ಕೆ. ಜಂಕ್ಷನ್‌ನ ಯಶವಂತ್ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಯಾಗಿದ್ದಾನೆ.

ಯಶವಂತ್ ಆರ್.ಪ್ರಾಜೆಕ್ಟ್ ನಲ್ಲಿರುವ ರಾಷ್ಟ್ರೀಯ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ. ಕರೊನಾ ಸಂದರ್ಭದಲ್ಲಿ ಆನ್‌ಲೈನ್ ತರಗತಿಗಾಗಿ ಯಶವಂತನಿಗೆ ಪಾಲಕರು ಮೊಬೈಲ್ ಕೊಡಿಸಿದ್ದರು. ಇದೀಗ ರೆಗ್ಯುಲರ್ ತರಗತಿಗಳು ನಡೆಯುತ್ತಿದ್ದರೂ ಕಾಲೇಜಿನಿಂದ ಮನೆಗೆ ಬಂದಾಗ ಯಶವಂತ್ ಮೊಬೈಲ್ ಹಿಡಿದುಕೊಂಡಿರುತ್ತಿದ್ದ.

ಮೊಬೈಲ್ ಹೆಚ್ಚಾಗಿ ಬಳಸಬೇಡ ಎಂದು ತಂದೆ ಸುರೇಶ್ ಯಶವಂತ್‌ಗೆ ಬುದ್ಧಿಮಾತು ಹೇಳಿದ್ದರು. ಇಷ್ಟಕ್ಕೆ ಬೇಸರಗೊಂಡ ಯಶವಂತ್ ಸೆ.3ರಂದು ಕಾಲೇಜಿಗೆ ಹೋಗುವುದಾಗಿ ಹೇಳಿ ಹೋಗಿದ್ದಾನೆ. ಮನೆಗೆ ವಾಪಸ್ ಬಂದಿರಲಿಲ್ಲ. ಈ ಬಗ್ಗೆ ಸುರೇಶ್ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಆದರೆ ಗುರುವಾರ ಎಚ್.ಕೆ.ಜಂಕ್ಷನ್ ಬಳಿಯ ಭದ್ರಾ ನಾಲೆಯಲ್ಲಿ ಯಶವಂತ್ ಮೃತದೇಹ ಪತ್ತೆಯಾಗಿದೆ. ಪೋಲಿಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...