Friday, August 14, 2026
Friday, August 14, 2026

ದಟ್ಟಣೆಯ ಸಂಚಾರ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರದ ಚಿಂತನೆ- ಬೊಮ್ಮಾಯಿ

Date:

ಬೆಂಗಳೂರು ನಗರದ ಸಂಚಾರ ದಟ್ಟಣೆಯ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ ರಚಿಸಲು ತೀರ್ಮಾನಿಸಲಾಗಿದ್ದು, ಮುಂದಿನ ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿ, ಕಾಯ್ದೆ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಇಂದು ಬೆಂಗಳೂರಿನಲ್ಲಿ ಕೇಂದ್ರದ ಭೂ ಸಂಪರ್ಕ ಮತ್ತು ಹೆದ್ದಾರಿಗಳ ಸಚಿರ ನಿತಿನ್ ಗಡ್ಕರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡ ಸಿಎಂ ನಂತ್ರ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಂಗಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಬಿಬಿಎಂಪಿ, ಬಿಡಿಎ, ಬಿಎಂಆರ್ ಡಿಎ, ಲೋಕೋಪಯೋಗಿ ಇಲಾಖೆ ಗಳಿಂದ ಹಲವು ಕಾಮಗಾರಿಗಳು ನಡೆಯುತ್ತಿರುತ್ತವೆ. ಈ ಬಗ್ಗೆ ಸಮಗ್ರ ಮಾಸ್ಟರ್ ಪ್ಲಾನ್ ರೂಪಿಸಿದರೆ ಬಹಳಷ್ಟು ಸಮಸ್ಯೆಗಳು ನಿವಾರಣೆಯಾಗುತ್ತವೆ. ಈ ಎಲ್ಲ ಸಂಸ್ಥೆಗಳ ಜೊತೆಗೆ ರೈಲ್ವೆ , ಮಟ್ರೋ ವನ್ನು ಒಳಗೊಂಡಂತೆ ಬೆಂಗಳೂರು ಮತ್ತು ಬೆಂಗಳೂರು ಸುತ್ತಮುತ್ತಲಿನ ಸಂಚಾರ ದಟ್ಟಣೆಯ ನಿರ್ವಹಣೆಗೆ ಪ್ರಾಧಿಕಾರವನ್ನು ರಚನೆ ಮಾಡಲಾಗುವುದು ಎಂದು ಅವರು ತಿಳಿಸಿದರು.

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನೇತೃತ್ವದಲ್ಲಿ ಇಡೀ ರಾಷ್ಟ್ರದ ರಸ್ತೆ ಸಾರಿಗೆ ವ್ಯವಸ್ಥೆ ಬಗ್ಗೆ ‘ಮಂಥನ’ ಸಮಾವೇಶವನ್ನು 3 ದಿನಗಳ ಕಾಲ ನಡೆಯುತ್ತಿದೆ. ಈ ಸಂದರ್ಭದಲ್ಲಿ ಬೆಂಗಳೂರಿನ ರಸ್ತೆ ಹಾಗೂ ಸಂಚಾರದಟ್ಟಣೆಯ ಬಗ್ಗೆ ಕೇಂದ್ರ ಸಚಿವರೊಂದಿಗೆ ಸಭೆ ನಡೆಸಲಾಗಿದ್ದು, ಕೇಂದ್ರದ ಸಹಯೋಗ ಮತ್ತು ಸಹಕಾರವನ್ನು ಕೋರಲಾಗಿದೆ. ರಾಷ್ಟ್ರೀಯ ಹೆದ್ದಾರಿಗಳು ಬೆಂಗಳೂರಿನ ಒಳಗೆ ಮತ್ತು ಹೊರಗೆ ಹಾದುಹೋಗುತ್ತವೆ. ಸಂಚಾರ ದಟ್ಟಣೆಯ ನಿವಾರಣೆಗೆ ರಸ್ತೆ ನಿರ್ಮಾಣಗಳು ಬಲು ಮುಖ್ಯವಾಗಿದೆ. ಹಲವು ವಿಚಾರಗಳನ್ನು ಈ ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...