Tuesday, June 17, 2025
Tuesday, June 17, 2025

ರಾಜಪಥವು ಈಗ ಕರ್ತವ್ಯ ಪಥ – ಮೋದಿ

Date:

ರಾಜ್ ಪಥ್ ಗುಲಾಮಿತನದ ಸಂಕೇತವಾಗಿತ್ತು. ಕಿಂಗ್ಸ್ ವೇ ಇತಿಹಾಸ ಪುಟ ಸೇರಿದೆ. ಈಗ ಕರ್ತವ್ಯ ಪಥದ ರೂಪದಲ್ಲಿ ಹೊಸ ಯುಗ ಆರಂಭವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಪ್ರಧಾನಿ ಮೋದಿ ಅವರು ದೆಹಲಿಯ ಹೃದಯಭಾಗದಲ್ಲಿರುವ ಇಂಡಿಯಾ ಗೇಟ್‌ನಲ್ಲಿ ಸ್ಥಾಪಿಸಲಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 28 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಿದರು.

ಬಳಿಕ ನವೀಕೃತಗೊಂಡ ಕರ್ತವ್ಯ ಪಥ್(ಹಿಂದೆ ರಾಜ್ ಪಥ್ ಎಂದು ಕರೆಯಲಾಗುತ್ತಿತ್ತು) ಮಾರ್ಗವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ರಾಜ್ ಪಥ್ ದಬ್ಬಾಳಿಕೆ ಮತ್ತು ಗುಲಾಮಗಿರಿಯ ಸಂಕೇತವಾಗಿದೆ. ಇಂದು ವಾಸ್ತುಶೈಲಿ ಬದಲಾಗಿದೆ. ಈಗ ಸಂಸದರು, ಸಚಿವರು ಕರ್ತವ್ಯದ ಹಾದಿಯಲ್ಲಿ ನಡೆದಾಗ ಅವರಿಗೆ ತಮ್ಮ ಕರ್ತವ್ಯದ ಪ್ರಜ್ಞೆ ಮೂಡುತ್ತದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Friends Health Care Center ಜೂ.18 ರಂದು ಉಚಿತ ಮಧುಮೇಹ ಮತ್ತು ರಕ್ತದೊತ್ತಡ ತಪಾಸಣಾ ಶಿಬಿರ

Friends Health Care Center ಫ್ರೆಂಡ್ಸ್ ಹೆಲ್ತ್ ಕೇರ್ ಸೆಂಟರ್ ಸುದೇನು...