Wednesday, May 6, 2026
Wednesday, May 6, 2026

ಆತ್ಮಹತ್ಯೆಯೊಂದೇ ಕೊನೆಯಲ್ಲ ಬಾಳಲು ದಾರಿ ನೂರಾರು

Date:

ಆತ್ಮಹತ್ಯೆಯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದನ್ನು ನಾವು ಮಾಧ್ಯಮಗಳಲ್ಲಿ ಕೇಳಿರುತ್ತೇವೆ, ನೋಡಿರುತ್ತೇವೆ. ಆತ್ಮಹತ್ಯೆಗೆ ಹೆಚ್ಚಾಗಿ ಯುವಕರೇ ಬಲಿಯಾಗುತ್ತಿರುವುದು ವಿಷಾದ ಸಂಗತಿ.

ಸಂಸಾರದ ತಾಪತ್ರಯ, ಪ್ರೀತಿ ವೈಫಲ್ಯ, ಸಾಲಭಾದೆ ಹೀಗೆ ನಾನ ಕಾರಣಗಳಿಂದ ಜನರು ಆತ್ಮಹತ್ಯೆಗೆ ಶರಣಾಗುತ್ತಾರೆ. ಇತ್ತೀಚಿನ ದಿನಗಳಲ್ಲಿ ಕ್ಷುಲ್ಲಕ ಕಾರಣಗಳಿಂದಲೂ ಕೂಡ ತಮ್ಮ ಅಮೂಲ್ಯ ಜೀವವನ್ನ ಕಳೆದುಕೊಂಡಿರುವ ಘಟನೆಗಳೇ ಹೆಚ್ಚು.

ವಿಶ್ವದಲ್ಲಿ ಪ್ರತಿವರ್ಷ ಎಂಟರಿಂದ ಒಂಬತ್ತು ಲಕ್ಷ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಅನೇಕ ಅಧ್ಯಯನಗಳಿಂದ ತಿಳಿದು ಬಂದಿದೆ. ಭಾರತದಲ್ಲಿ ಪ್ರತಿ ವರ್ಷ ಒಂದು ಲಕ್ಷಕ್ಕಿಂತ ಹೆಚ್ಚು ಜನರು ಆತ್ಮಹತ್ಯೆಯ ಮೊರೆ ಹೋಗುತ್ತಿದ್ದಾರೆ ಎಂಬುದು ಅಧ್ಯಯನದಿಂದ ತಿಳಿದುಬಂದಿದೆ.

ಆತ್ಮಹತ್ಯೆಯನ್ನು ತಡೆಯಲು ಮತ್ತು ಜನರಲ್ಲಿ ಬದುಕುವ ಭರವಸೆಯನ್ನ ತುಂಬುವ ಉದ್ದೇಶದಿಂದ 2003ರ ಸೆಪ್ಟೆಂಬರ್ 10ರಂದು ಆತ್ಮಹತ್ಯೆ ತಡೆ ದಿನವನ್ನಾಗಿ ಆಚರಿಸಲಾಯಿತು. ಪ್ರತಿ ವರ್ಷ ಸೆಪ್ಟೆಂಬರ್ 10ರಂದು ಆತ್ಮಹತ್ಯೆ ತಡೆ ದಿನ ಎಂದು ಆಚರಿಸಲಾಗುತ್ತಿದೆ.

ಮನುಷ್ಯ ಎಂದ ಮೇಲೆ ಸಮಸ್ಯೆಗಳು ಬರುವುದು ಸಹಜ… ಸಮಸ್ಯೆಗಳು ಬಂತೆಂದು, ಆತ್ಮಹತ್ಯೆ ಒಂದೇ ಪರಿಹಾರವಲ್ಲ. ಸಮಸ್ಯೆಗಳು ಇದ್ದ ಮೇಲೆ ಪರಿಹಾರವೂ ಕೂಡ ಇದ್ದೇ ಇರುತ್ತದೆ. ಅದನ್ನು ಅರಿತು ಪರಿಹಾರವನ್ನು ಕಂಡುಕೊಳ್ಳುವುದು ಒಳಿತು…

– ರಚನಾ.ಕೆ.ಆರ್

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...