Friday, August 14, 2026
Friday, August 14, 2026

ಮುರುಘಾ ಮಠದ ಬಗ್ಗೆ ಕೋಡಿಶ್ರೀಗಳವಾಣಿ

Date:

ಮುರುಘಾ ಮಠದ ಆಂತರಿಕ ಸಮಸ್ಯೆಗಳು ಆ ಸಂಸ್ಥೆಯನ್ನು ಬಲಿತೆಗೆದುಕೊಂಡಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀಗಳು ಅಭಿಪ್ರಾಯಪಟ್ಟಿದ್ದಾರೆ.

ಮಂಡ್ಯದಲ್ಲಿ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಕುಟುಂಬದ ಅಪೂರ್ವ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಗೆ ಭೇಟಿ ನೀಡಿದ ಕೋಡಿಮಠದ ಶ್ರೀಗಳು ಸುದ್ದಿಗಾರರೊಂದಿಗೆ ಮಾತನಾಡಿದರು.

ಆಚಾರ, ವಿಚಾರ ಮತ್ತು ಪ್ರಚಾರ ಸಮಾಜದಲ್ಲಿ ಬಹುಮುಖ್ಯ. ಯಾರಾದರೂ ಪರಸ್ಪರ ಭೇಟಿಯಾದರೆ ಮೊದಲು ಕೇಳುವುದೇ ಏನ್ ಸಮಾಚಾರ ಎಂದು. ಇಂದು ನಮ್ಮ ಪರಂಪರಾಗತ ಆಚಾರ. ಉಭಯ ಕುಶಲೋಪರಿಯ ಅನಂತರ ವಿಚಾರ ವಿನಿಮಯ. ತನ್ನೊಳಗಿನ ವಿಚಾರವನ್ನು ಸಾರ್ವತ್ರೀಕರಣಗೊಳಿಸಲು ಒಂದಷ್ಟು ಪ್ರಚಾರ. ಆದರೆ ಇಂದು ಇವೆಲ್ಲವನ್ನೂ ಹಿಂದೆ ತಳ್ಳಿ ಅಪಪ್ರಚಾರ ಮುಂಚೂಣಿಗೆ ಬಂದಿದೆ ಎಂದರು.

ಅಪಪ್ರಚಾರದ ಅಲೆ ಧರ್ಮ, ರಾಜಕಾರಣ ಸೇರಿದಂತೆ ಎಲ್ಲಕಡೆ ಆವರಿಸಿದೆ. ಇದರಿಂದ ಮೌಲ್ಯಗಳು ಹಾಳಾಗುತ್ತಿವೆ. ಉತ್ತಮ ಕೆಲಸ ಮಾಡಲು ಹಿಂಜರಿಯುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಅಪಪ್ರಚಾರ ಒಂದು ಸಾಮಾಜಿಕ ಪೀಡೆಯಾಗಿ ಬೆಳೆಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ ಸ್ವಾಮೀಜಿ ಸತ್ಯಕ್ಕೆ ಅಂತಿಮ ಗೆಲುವು ಎನ್ನುವುದಾದರೂ ಇಂದು ಸತ್ಯ ಹೊರಬರುವಷ್ಟರಲ್ಲಿ ವ್ಯಕ್ತಿ ಸಾವಿನ ಮನೆ ಸೇರಿರುತ್ತಾನೆಂದು ಶ್ರೀಗಳು ಆತಂಕ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...