Wednesday, May 6, 2026
Wednesday, May 6, 2026

ಹುತಾತ್ಮರಾಗುವ ಅರಣ್ಯ ಸಿಬ್ಬಂದಿ ಕುಟುಂಬಕ್ಕೆ ಪರಿಹಾರ ನೀಡಿಕೆ ಹೆಚ್ಚಳ- ಬೊಮ್ಮಾಯಿ

Date:

ಅರಣ್ಯ ಹುತಾತ್ಮರ ಕುಟುಂಬಕ್ಕೆ ಸ್ಥಿರತೆ ಮತ್ತು ಭದ್ರತೆ ನೀಡುವ ದೃಷ್ಟಿಯಿಂದ 30 ಲಕ್ಷ ರೂ.ಗಳಿದ್ದ ಪರಿಹಾರದ ಮೊತ್ತವನ್ನು 50 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಅರಣ್ಯ ಇಲಾಖೆ ಆಯೋಜಿಸಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ 2022 ರಲ್ಲಿ ಭಾಗವಹಿಸಿ ಹುತಾತ್ಮರಿಗೆ ಗೌರವ ಸಲ್ಲಿಸಿ ಮಾತನಾಡಿದ ಅವರು, ಹುತಾತ್ಮರಿಗೆ 20 ಲಕ್ಷ ರೂ.ಗಳಿದ್ದ ಪರಿಹಾರವನ್ನು 30 ಲಕ್ಷ ರೂ.ಗಳಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೆಚ್ಚಿಸಿದ್ದರು.

ಹುತಾತ್ಮರ ನೇಮಕಾತಿ, ಕಲ್ಯಾಣ ಎಲ್ಲವನ್ನೂ ಸರ್ಕಾರ ಅತ್ಯಂತ ಸಹಾನುಭೂತಿಯಿಂದ ಮಾಡಲಿದೆ. ನೀವು ಅರಣ್ಯ ರಕ್ಷಣೆ ಮಾಡಿ, ಸರ್ಕಾರ ನಿಮ್ಮ ರಕ್ಷಣೆ ಮಾಡುತ್ತದೆ ಎಂದರು.

ರಾಜ್ಯದಲ್ಲಿ ನಾಲ್ಕು ಲಕ್ಷ ಹೆಕ್ಟೇರ್ ಗಿಂತ ಹೆಚ್ಚು ಬಂಜರು ಭೂಮಿ ಇದ್ದು ಇದನ್ನು ನಾವು ಅರಣ್ಯೀಕರಣ ಮಾಡುವ ಮೂಲಕ ಅರಣ್ಯ ಪ್ರದೇಶ ಹೆಚ್ಚಿಸಬಹುದು. ಬಹಳಷ್ಟು ಗುಡ್ಡಗಾಡುಗಳಿವೆ. ಅಲ್ಲಿ ಮೂಲ ಗಿಡಗಳನ್ನು ಬೆಳೆಸುವ ಮೂಲಕ ಉತ್ತಮಗೊಳಿಸಬಹುದು. ಟಾಟಾ ಸಂಸ್ಥೆಯ ಕಬ್ಬಿಣದ ಅದಿರಿನ ಗಣಿಗಳು ಜಮ್ ಶೇಡ್ ಪುರದಲ್ಲಿದ್ದು, ಅಲ್ಲಿ ಎಲ್ಲೆಲ್ಲಿಯೂ ಹಸಿರಿನಿಂದ ತುಂಬಿದೆ. ಗಣಿಗಳಲ್ಲಿ ಮಾಡಬಹುದಾದರೆ ಗುಡ್ಡಗಾಡಿನಲ್ಲಿ ಸಾಧ್ಯವಿಲ್ಲವೇ. ಇಚ್ಚಾಶಕ್ತಿ ಇದ್ದರೆ ಅರಣ್ಯ ಪ್ರದೇಶ ಹೆಚ್ಚಿಸೋಣ. ಜನಾಂಗಕ್ಕೆ ಇದಕ್ಕಿಂತ ಹೆಚ್ಚಿನ ಕೊಡುಗೆ ಮತ್ತೊಂದಿಲ್ಲ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...