Thursday, May 7, 2026
Thursday, May 7, 2026

ದಸರಾ ಉತ್ಸವಕ್ಕೆ ಸಜ್ಜಾಗುತ್ತಿದೆ ಮೈಸೂರು

Date:

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಮೈಸೂರು ಅರಮನೆ ಮತ್ತು ವಿವಿಧೆಡೆ ಸಿದ್ಧತೆ ಆರಂಭವಾಗಿದೆ.

ಸೆ.20ರ ಮಂಗಳವಾರದಿಂದ ಸಿಂಹಾಸನ ಜೋಡಣೆ ಆರಂಭವಾಗಿದೆ. ಅಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರಗೆ ಅರಮನೆಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸೆ.26ರಂದು ಖಾಸಗಿ ದರ್ಬಾರ್ ಹಾಗೂ ವಿವಿಧ ಪೂಜೆಗಳು, ಧಾರ್ಮಿಕ ವಿಧಿಗಳು ನೆರವೇರಲಿವೆ. ಅಂದೂ ಸಹ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಅಕ್ಟೋಬರ್ 4ರಂದು ಅರಮನೆಯಲ್ಲಿ ಆಯುಧಪೂಜೆ ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ. ಅ.5ರಂದು ವಿಜಯದಶಮಿ ಆಚರಣೆ ಇರುತ್ತದೆ. ಅಂದೂ ಸಹ ಸಂಪೂರ್ಣ ಅರಮನೆ ಪ್ರವೇಶಕ್ಕೆ ನಿರ್ಬಂಧವಿದೆ. ಅ.20ರಂದು ಸಿಂಹಾಸನ ವಿಸರ್ಜನೆ‌ ಹಿನ್ನೆಲೆಯಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಇರುತ್ತದೆ ಎಂದು ಅರಮನೆ ಆಡಳಿತ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಮಣ್ಯ ಮಾಹಿತಿ ನೀಡಿದ್ದಾರೆ.

ಜಗದ್ವಿಖ್ಯಾತ ಮೈಸೂರು ದಸರಾ ಉತ್ಸವ ಸೆಪ್ಟೆಂಬರ್ 26ರಿಂದ ಆರಂಭವಾಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದಸರಾ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

2022ರ ಮೈಸೂರು ದಸರಾ ಉತ್ಸವಕ್ಕೆ ಗೋಲ್ಡ್ ಪಾಸ್ ಇರುವುದಿಲ್ಲ ಎಂದು ಮೈಸೂರಿನಲ್ಲಿ ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.

ಗಣ್ಯರು, ವಿದೇಶಿಗರು ಹೆಚ್ಚಾಗಿ ಗೋಲ್ಡ್ ಪಾಸ್ ಅವಲಂಬಿಸಿದ್ದರು. ಒತ್ತಡ ಕಡಿಮೆ ಮಾಡುವ ಸಲುವಾಗಿ ಗೋಲ್ಡ್ ಪಾಸ್​ನ್ನು ರದ್ದು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ವಿವಿಐಪಿ ಪಾಸ್ ಹಾಗೂ ಕರ್ತವ್ಯನಿರತ ಪಾಸ್ ಹೊರತುಪಡಿಸಿ ಉಳಿದ ಪಾಸ್‌ಗಳನ್ನು ರದ್ದು ಮಾಡಲು ಚಿಂತನೆ ಮಾಡಲಾಗಿದೆ.

ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿಗೆ ಅಭಿಮನ್ಯು ನೇತೃತ್ವದಲ್ಲಿ ಗಜಪಡೆ ಮೈಸೂರಿಗೆ ಬಂದಿದೆ. 4 ಹೆಣ್ಣಾನೆಗಳು ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲಿವೆ. ಗೋಪಾಲಸ್ವಾಮಿ, ಅಭಿಮನ್ಯು, ಭೀಮ, ಮಹೇಂದ್ರ, ಅರ್ಜುನ, ವಿಕ್ರಮ, ಧನಂಜಯ, ಕಾವೇರಿ, ಗೋಪಿ, ಶ್ರೀರಾಮ, ವಿಜಯಾ, ಚೈತ್ರಾ, ಲಕ್ಷ್ಮೀ, ಪಾರ್ಥಸಾರಥಿ ಆನೆಗಳು ಮೈಸೂರಿನಲ್ಲಿ ಬೀಡುಬಿಟ್ಟಿದ್ದು, ಪ್ರತಿದಿನ ತಾಲೀಮು ಮಾಡುತ್ತಿವೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...