Sunday, March 22, 2026
Sunday, March 22, 2026

ಕ್ರಿಯೆಟಿವ್ ಕಾಲೇಜಿನಲ್ಲಿ ಕಂಪೆನಿ ಸೆಕ್ರೆಟರಿ ಕಾರ್ಯಾಗಾರ

Date:

09/09/2022 ರಂದು ಕ್ರಿಯೇಟಿವ್‌ ಪಿ ಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಸಿ ಎಸ್‌ ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಸಿ.ಎಸ್‌ ಬಗ್ಗೆ ಖ್ಯಾತ ಕಂಪೆನಿ ಸೆಕ್ರೇಟರಿ ಸಂತೋಷ ಪ್ರಭು ವಿದ್ಯಾರ್ಥಿಗಳಿಗೆ ಸಿ.ಎಸ್‌ ನ ಮಹತ್ವದ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ನೀಡಿದರು.

ಗಣ್ಯರು ಈ ಕಾರ್ಯಗಾರದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ C.S ಎಂಬುದು ಒಂದು ಅತ್ಯುನ್ನತ ಹುದ್ದೆ ಇಂದು ಭಾರತದಲ್ಲಿ C.S ನ ಕೊರತೆ ಇದ್ದು, ವಿದ್ಯಾರ್ಥಿಗಳಿಗೆ ಇದರ ಬಗ್ಗೆ ಅರಿವು ಅಗತ್ಯ ಎಂದರು.

ಸಿ ಎಸ್‌ ಎನ್ನುವುದು ಶೈಕ್ಷಣಿಕ ಸಂಸ್ಥೆಯಲ್ಲಿ ಪ್ರಾಂಶುಪಾಲರು ಹೇಗೆ ವಿದ್ಯಾರ್ಥಿಗಳ, ಬೋಧಕ ಬೋಧಕೇತರ ವರ್ಗದವರ ಸಮಗ್ರ ಕಾರ್ಯಚಟುವಟಿಕೆಗಳ ಬಗ್ಗೆ ಪರಿಶೀಲಿಸುತ್ತಾರೆಯೋ ಹಾಗೆ ಒಬ್ಬ ಕಂಪೆನಿ ಸೆಕ್ರೆಟರಿಯೂ ಕೂಡಾ ತನ್ನೆಲ್ಲಾ ಕಂಪೆನಿ ಉದ್ಯೋಗಿಗಳ, ಆಡಳಿತ ವರ್ಗದವರ ಬಗ್ಗೆ ಸದಾ ಕಾಳಜಿವಹಿಸಿ, ಕಾರ್ಯೋನ್ಮುಖರಾಗುವುದರೊಂದಿಗೆ ಕಂಪೆನಿಯ ಯಶಸ್ಸಿನ ಬಗ್ಗೆ ಚಿಂತಿಸುವ ಮಹತ್ವಾಕಾಂಕ್ಷಿ ಹುದ್ದೆಯಾಗಿರುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಶ್ರೀ ರಾಘವೇಂದ್ರ ಬಿ ರಾವ್‌, ಶ್ರೀ ಉಮೇಶ್‌, ಶ್ರೀಮತಿ ಅಕ್ಷತಾ ಜೈನ್‌ ಮತ್ತಿತರಿದ್ದರು. ವಿದ್ಯಾರ್ಥಿನಿ ವಿನುತ ಕಾರ್ಯಕ್ರಮ ನಿರೂಪಿಸಿದರು, ಪ್ರಜ್ವಲ್‌ ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sagara News ಸಾಗರದಲ್ಲಿ “ಕ್ಯಾಂಪಸ್ ಕಟ್ಟೆ”.ಸಾಧಕಿಯರ ಬಗ್ಗೆ ವಿದ್ಯಾರ್ಥಿನಿಯರಿಂದ ಪರಿಚಯ.

Sagara News ಮಹಿಳಾ ಸಬಲೀಕರಣ ಪ್ರಾಮುಖ್ಯತೆ ಪಡೆಯುತ್ತಿರುವ ಅದೂ ಮಹಿಳಾ ದಿನಾಚರಣೆಯ...

Bakkeshwara Swamy Rathotsava ದಾವಣಗೆರೆ ಹೃದಯಭಾಗದ ರಾಜಬೀದಿಯ ಏಕೈಕವಾದ ಶ್ರೀಬಕ್ಕೇಶ್ವರ ಮಹಾರಥೋತ್ಸವ. ...

Bakkeshwara Swamy Rathotsava ದಾವಣಗೆರೆಯು ಅನಾದಿಕಾಲದಿಂದಲೂ ವ್ಯಾಪಾರೋದ್ಯಮಕ್ಕೆ ಪ್ರಸಿದ್ಧವಾದ ಕೇಂದ್ರವಾಗಿದ್ದು 1801...

KFD ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷಎರಡನೇ ಬಲಿ.

KFD ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಟ್ಟಿಕೇವಿಯಲ್ಲಿ ಮಂಗನ ಕಾಯಿಲೆಗೆ ಈ...

Cheetah Attack ಮುತ್ತಗಿ ಗ್ರಾಮದ ರೈತನ ಮೇಲೆ ಚಿರತೆ ಹಠಾತ್ ದಾಳಿ. ಮೆಗ್ಗಾನ್ ಆಸ್ಪತ್ರೆಗೆ ರೈತ ದಾಖಲು.

Cheetah Attack ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ, ಮುತ್ತಗಿ ಗ್ರಾಮದ ರೈತರ...