Friday, December 5, 2025
Friday, December 5, 2025

ಕಿಸಾನ್ ಸಮ್ಮಾನ್ ನಿಧಿ ಮಾಹಿತಿ

Date:

ಕೇಂದ್ರ ಸರ್ಕಾರ ರೈತರಿಗಾಗಿ ಹಲವು ಯೋಜನೆಗಳನ್ನ ನಡೆಸುತ್ತಿದೆ. ರೈತರನ್ನ ಬೆಂಬಲಿಸಲು ಕೇಂದ್ರವು ವಿವಿಧ ಹೂಡಿಕೆ ಯೋಜನೆಗಳ ಮೂಲಕ ಉತ್ತಮ ಆದಾಯವನ್ನ ಗಳಿಸುತ್ತಿದೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ಮೋದಿ ಸರ್ಕಾರವು ರೈತರಿಗಾಗಿ ಪರಿಚಯಿಸಿದ ಯೋಜನೆಗಳಲ್ಲಿ ಒಂದಾಗಿದೆ.

ಈ ಯೋಜನೆಯ ಮೂಲಕ ರೈತರು ವರ್ಷಕ್ಕೆ 6000 ರೂಪಾಯಿ ಮೂರು ಕಂತುಗಳಲ್ಲಿ ಪಡೆಯುತ್ತಾರೆ. ಇದುವರೆಗೆ ರೈತರಿಗೆ 11ನೇ ಕಂತು ಬಂದಿದ್ದು, ಈಗ 12ನೇ ಕಂತು ಬರುತ್ತಿದೆ. ಈ ಹಣವೂ ಈ ತಿಂಗಳ ಅಂತ್ಯದೊಳಗೆ ರೈತರ ಖಾತೆಗೆ ಜಮೆಯಾಗುವ ಸಾಧ್ಯತೆ ಇದೆ. ಈ ಯೋಜನೆಯ ಭಾಗವಾಗಿ, ಕೇಂದ್ರ ಸರ್ಕಾರವು ರೈತರಿಗೆ ಕೆಲವು ವಿಶೇಷ ಸಂಖ್ಯೆಗಳನ್ನು ನಿಗದಿಪಡಿಸಿದೆ.
ಈ ಸಂಖ್ಯೆಗಳ ಮೂಲಕ ರೈತರು ಸಂಪೂರ್ಣ ಮಾಹಿತಿ ಪಡೆಯಬಹುದು.

ಅಗ್ರಿಕಲ್ಚರ್ ಇಂಡಿಯಾ ತನ್ನ ಅಧಿಕೃತ ಟ್ವೀಟ್‌ನಲ್ಲಿ ಪಿಎಂ ಕಿಸಾನ್ ಯೋಜನೆಗೆ ಅರ್ಜಿ ಸಲ್ಲಿಸಿದ ದೇಶದ ರೈತರಿಗೆ ಅರ್ಜಿಯ ಸ್ಥಿತಿಯನ್ನು ತಿಳಿಯಲು ಸಂಖ್ಯೆಯನ್ನ ಬಿಡುಗಡೆಗೊಳಿಸಿದೆ. ಅರ್ಜಿ ಸಲ್ಲಿಸಿದ ರೈತರು 155261 ಸಂಖ್ಯೆಗೆ ಕರೆ ಮಾಡಿ ಅರ್ಜಿ ಸ್ಥಿತಿ ಮತ್ತು ಕಂತು ನವೀಕರಣದ ಬಗ್ಗೆ ತಿಳಿದುಕೊಳ್ಳಬಹುದು.

ವೆಬ್‌ಸೈಟ್ ಮೂಲಕ ನಿಮ್ಮ ಕಂತು ಸ್ಥಿತಿಯನ್ನ ಸಹ ನೀವು ಪರಿಶೀಲಿಸಬಹುದು. ನೀವು ಮೊದಲು ಅಧಿಕೃತ ವೆಬ್‌ಸೈಟ್‌ಗೆ ಹೋಗಬೇಕು. ನಂತರ ಬಲಭಾಗದಲ್ಲಿರುವ ‘ಫಾರ್ಮರ್ಸ್ ಕಾರ್ನರ್’ ಆಯ್ಕೆಯನ್ನ ಆರಿಸಿ. ನಂತರ ಬೆನಿಫಿಶಿಯರಿ ಸ್ಟೇಟಸ್ ಮೇಲೆ . ನಂತರ ಹೊಸ ಪುಟ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಆಧಾರ್ ಸಂಖ್ಯೆ ಅಥವಾ ಬ್ಯಾಂಕ್ ಖಾತೆಯನ್ನ ಆಯ್ಕೆ ಮಾಡಬೇಕು. ನಂತರ ನಿಮ್ಮ ಖಾತೆಗೆ ಹಣ ಬರುತ್ತದೆಯೇ.? ಇಲ್ಲವೇ.? ಅನ್ನುವುದನ್ನು ಪರಿಶೀಲಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...