Friday, March 20, 2026
Friday, March 20, 2026

ಸರ್ ಎಂ.ವಿ.ರಾಷ್ಟ್ರ ನಿರ್ಮಿಸಿದ ಮಹಾಮೇಧಾವಿ- ಈಶ್ವರಪ್ಪ

Date:

ಸರ್ ಎಂ ವಿಶ್ವೇಶ್ವರಯ್ಯನವರು ರಾಷ್ಟ್ರವನ್ನು ನಿರ್ಮಾಣ ಮಾಡಿದಂತಹ ಮಹಾನ್ ಮೇಧಾವಿ ಎಂದು ಕೆ ಎಸ್ ಈಶ್ವರಪ್ಪ ನವರು ಹೇಳಿದರು ಸರ್. ಎಂ ವಿ ಅಭಿಮಾನಿ ಬಳಗ ತಾಲೂಕು ಬ್ರಾಹ್ಮಣ ಸೇವಾ ಸಂಘ ಹಾಗೂ ಅನೇಕ ಸಂಘ ಸಂಸ್ಥೆಗಳ ವತಿಯಿಂದ ನಿರ್ಮಾಣ ಮಾಡಿದಂತಹ ಸರ್. ಎಂ ವಿಶ್ವೇಶ್ವರಯ್ಯನವರ ಪುತ್ತಳಿಯನ್ನು ಮೈನ್ ಮೆಡ್ಲಿ ಸ್ಕೂಲ್ ಆವರಣದಲ್ಲಿ ಅನಾವರಣ ಗೊಳಿಸಿ ಮಾತನಾಡಿದರು ಸರ್ ಎಂ ವಿ ಅವರು ಪ್ರಪಂಚದಲ್ಲಿರುವ ಮೇಧಾವಿಗಳಲ್ಲಿ ಪ್ರಥಮ ಸ್ಥಾನದಲ್ಲಿ ಇದ್ದಾರೆ ಇಡೀ ಪ್ರಪಂಚಕ್ಕೆ ಅವರ ಕೊಡುಗೆ ಅಮೂಲ್ಯವಾದದ್ದು ಶಾಲೆಯ ಮಕ್ಕಳೆಲ್ಲರೂ ಅವರು ನಡೆದು ಬಂದಂತಹ ದಾರಿ ಎನ್ನು ಅರ್ಥೈಸಿಕೊಳ್ಳಬೇಕು ವಿಶ್ವೇಶ್ವರಯ್ಯನವರ ಮಾದರಿಯಲ್ಲಿ ವಿದ್ಯೆಯನ್ನು ಕಲಿತು ವಿದ್ಯಾರ್ಥಿಗಳು ಜೀವನದಲ್ಲಿ ಬಹಳ ಉತ್ತುಂಗಕ್ಕೆ ಬೆಳೆಯಲಿ ಎಂಬ ದೃಷ್ಟಿಯಿಂದ ಈ ಜಾಗದಲ್ಲಿ ಅವರ ಪ್ರತಿಮೆಯನ್ನು ಅನಾವರಣ ಮಾಡಲಾಗಿದೆ ಬೇರೆ ಎಲ್ಲಾ ಇಂಜಿನಿಯರ್ಸ್ಗಳಿಗೆ ಸರ್ ಎಂ ವಿ. ಯವರು ಮಾದರಿಯಾಗಿದ್ದರು ಅವರ ಕಾಲದಲ್ಲಿ ಕೇವಲ ಸೇತುವೆ ಕೈಗಾರಿಕೆ ಡ್ಯಾಮ್ಗಳಷ್ಟೇ ನಿರ್ಮಾಣ ಮಾಡದೆ ಮಹಾನ್ ರಾಷ್ಟ್ರಭಕ್ತರಾಗಿ ಇಡೀ ರಾಷ್ಟ್ರವನ್ನು ನಿರ್ಮಾಣ ಮಾಡಿದಂತಹ ಕೊಡುಗೆ ಅವರಿಗೆ ಸಲ್ಲುತ್ತದೆ ಎಂದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಬ್ರಾಹ್ಮಣ ಸೇವಾ ಸಂಘದ ಅಧ್ಯಕ್ಷರಾದ ವೆಂಕಟೇಶ್ ರಾವ್ ಅವರು ಮಾತನಾಡಿ ಹಲವಾರು ವರ್ಷಗಳ ಹಿಂದೆ ನಮ್ಮ ಸಂಘದ ಮಾಜಿ ಅಧ್ಯಕ್ಷರಾದ ರವಿಶಂಕರ್ ಅವರ ನೇತೃತ್ವದಲ್ಲಿ ಪುತ್ತಳಿಯನ್ನು ತಾಲೂಕ್ ಬ್ರಾಹ್ಮಣ ಸೇವಾ ಸಂಘದ ವತಿಯಿಂದ ಮಾಡಿಸಲಾಗಿತ್ತು ನಮ್ಮ ಗಾಯತ್ರಿ ದೇವಸ್ಥಾನದಲ್ಲೇ ಪ್ರತಿ ವರ್ಷ ಸರಿ ಎಂ. ವಿ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಗುತ್ತಿತ್ತು ಆದರೆ ಅದನ್ನು ನಗರ ಭಾಗದಲ್ಲಿ ಇಡಲು ಸೂಕ್ತವಾದಂತಹ ಸಮಯ ಜಾಗ ಬಂದಿರಲಿಲ್ಲ ಈಶ್ವರಪ್ಪನವರ ಸಹಾಯದಿಂದ ಪುತ್ತಳಿ ಸರ್ ಎಂ.ವಿ ಅವರ ಜನ್ಮದಿನದೊಂದೇ ಅನಾವರಣಗೊಳ್ಳುತ್ತಿದ್ದು ಬಹಳ ಸಂತೋಷವಾಗಿದೆ ಸರ್ ಎಂ ವಿಶ್ವೇಶ್ವರಯ್ಯ ಅವರ ಹೆಸರಿನ ನಾಮಫಲಕವನ್ನು ಆದಷ್ಟು ಬೇಗ ರಸ್ತೆ ಮಾರ್ಗದಲ್ಲಿ ಹಾಕಿಸಬೇಕು ಎಂದು ಮನವಿ ಮಾಡಿದರು
ಜಿಲ್ಲಾ ಬ್ರಾಹ್ಮಣ ಮಹಾಸಭಾಧ್ಯಕ್ಷರಾದ ನಟರಾಜ್ ಭಗವತ್ ಅಂಕಣಕಾರರಾದ ಸುಂದರ್ ರಾಜ್ ಕೆ ಎಸ್ ಎಸ್ ಐ ಡಿ ಸಿ ಮಾಜಿ ಉಪಾಧ್ಯಕ್ಷರಾದ ದತ್ತಾತ್ರಿ ಕರ್ನಾಟಕ ಬ್ಯಾಂಕ್ ಎಜಿಎಂ ಹಾಯವಧನ ಉಪಾಧ್ಯಾಯ ತಾಲೂಕು ಬ್ರಾಹ್ಮಣ ಸೇವಾ ಸಂಘದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರವಿಶಂಕರ್ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...