Monday, February 2, 2026
Monday, February 2, 2026

ಸ್ಫೂರ್ತಿ ದಿನಾಚರಣೆಯಾಗಿ ಡಾ.ಪುನೀತ್ ಜನ್ಮದಿನ

Date:

ದೊಡ್ಮನೆ ಹುಡುಗ ಪುನೀತ್ ರಾಜಕುಮಾರ್ ಅವರು ನಮ್ಮನ್ನು ಅಗಲಿ ಅನೇಕ ತಿಂಗಳುಗಳೆ ಕಳೆದಿದ್ದರೂ ಸಹ ಕನ್ನಡಿಗರ ಮನಸ್ಸಿನಲ್ಲಿ ಅವರು ಚಿರಸ್ಥಾಯಿಯಾಗಿ ಉಳಿದಿದ್ದಾರೆ. ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕ ಮಾತ್ರವಲ್ಲದೆ ದೇಶ, ವಿದೇಶಗಳಲ್ಲೂ ಅಭಿಮಾನಿಗಳಿದ್ದಾರೆ.

ಕರ್ನಾಟಕ ಸರ್ಕಾರ ಸಹ ಪುನೀತ್ ರಾಜಕುಮಾರ್ ಅವರ ಜನ್ಮದಿನವಾದ ಮಾರ್ಚ್ 17 ಅನ್ನು ಸ್ಪೂರ್ತಿ ದಿನವನ್ನಾಗಿ ಸರ್ಕಾರದ ವತಿಯಿಂದಲೇ ಆಚರಿಸಲು ತೀರ್ಮಾನಿಸಲಾಗಿದೆ. ಜೊತೆಗೆ ಈ ಬಾರಿಯ ದಸರಾ ಮಹೋತ್ಸವದ ಚಲನಚಿತ್ರ ಪ್ರದರ್ಶನ ಸಂದರ್ಭದಲ್ಲಿ ಅಪ್ಪು ಅಭಿನಯದ ಸಾಮಾಜಿಕ ಸಂದೇಶ ಸಾರುವ ಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ.

ಇದಕ್ಕಾಗಿ ಚಿತೋತ್ಸವದ ಒಂದು ದಿನ ಮೀಸಲಿಡಲಾಗಿದೆ.
ಇದರ ಮಧ್ಯೆ ಶಿವಮೊಗ್ಗದ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ಮತ್ತೊಂದು ಮಹತ್ವದ ಕಾರ್ಯ ಮಾಡಿದ್ದಾರೆ. ಅದೇನು ಅಂದ್ರೆ… ವಿಶ್ವದ ಅತ್ಯಂತ ಎತ್ತರದ ಪ್ರದೇಶಗಳಲ್ಲಿ ಒಂದಾಗಿರುವ ಲಡಾಕ್ ನ ಖರದುಂಗ್ಲಾ ಪಾಸ್ ನಲ್ಲಿ ಪುನೀತ್ ರಾಜಕುಮಾರ್ ಅವರ ಭಾವಚಿತ್ರದೊಂದಿಗೆ ಕನ್ನಡ ಧ್ವಜವನ್ನು ಹಾರಿಸಿ ಎಲ್ಲರ ಗಮನ ಸೆಳೆದಿದ್ದಾರೆ.

ಶಿವಮೊಗ್ಗ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್ ತಾಂದ್ಲೆ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಮೋದ್, ಪ್ರಮುಖರಾದ ಗೌತಮ್, ಹರೀಶ್, ಕಿರಣ್ ತಮ್ಮ ನೆಚ್ಚಿನ ನಟನ ಫೋಟೋದೊಂದಿಗೆ ಕ್ಲಿಕ್ಕಿಸಿಕೊಂಡಿರುವ ಈ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...