Thursday, June 25, 2026
Thursday, June 25, 2026

ಕಟ್ಟಡ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ನೆರವು- ಸಚಿವ ಹೆಬ್ಬಾರ್

Date:

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸೇರಿ ಇತರ ಸೌಲಭ್ಯಗಳ ಸಮರ್ಪಕ ವಿತರಣೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಕಾರ್ಮಿಕ ಸಚಿವ ಅರಬೈಲ್ ಶಿವರಾಂ ಹೆಬ್ಬಾರ್ ಅವರು ತಿಳಿಸಿದರು.

ವಿಧಾನ ಪರಿಷತ್ತಿನ ಕಲಾಪದ ವೇಳೆಯಲ್ಲಿ ಮಾನ್ಯ ವಿರೋಧ ಪಕ್ಷ ಮುಖ್ಯ ಸಚೇತಕರಾದ ಪ್ರಕಾಶ್ ಕೆ ರಾಥೋಡ್ ಅವರು ಸೆ.14ರಂದು ಪ್ರಸ್ತಾಪಿಸಿದ ಶೂನ್ಯ ವೇಳೆಯ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳಿಗೆ ಪ್ರಸ್ತುತ ಶೈಕ್ಷಣಿಕ ಸಹಾಯಧನ ಮತ್ತು ಶಿಶುಪಾಲನಾ ಸೌಲಭ್ಯ ಜಾರಿಯಲ್ಲಿರುತ್ತದೆ.

ಶೈಕ್ಷಣಿಕ ಸಹಾಯಧನವನ್ನು ಎಲ್ ಕೆ ಜಿ ಯಿಂದ ಪಿ.ಹೆಚ್.ಡಿ ಪದವಿಯವರೆಗೆ ಓದುತ್ತಿರುವ ಮಕ್ಕಳಿಗೆ ಪ್ರತಿ ವರ್ಷ ಸಹಾಯಧನವನ್ನು ನೀಡಲಾಗುತ್ತಿದೆ. 2021-22ನೇ ಸಾಲಿನಿಂದ ಈ ಸಹಾಯಧನವನ್ನು ಎಲ್ಲಾ ಮಕ್ಕಳಿಗೂ ನಿಗಧಿತ ಅವಧಿಯಲ್ಲಿ ತಲುಪಿಸುವ ಉದ್ದೇಶದಿಂದ ಸರ್ಕಾರದ ಎಸ್.ಎಸ್.ಪಿ. ಪೋರ್ಟ್ಲ್ ಮೂಲಕ ವಿತರಣೆ ಮಾಡಲಾಗುತ್ತಿದೆ. ಇದರಿಂದಾಗಿ ಮಕ್ಕಳ ಪೋಷಕರ ಖಾತೆಗಳಿಗೆ ಡಿ.ಬಿ.ಟಿ ಮೂಲಕ ನೇರವಾಗಿ ಹಣ ವರ್ಗಾವಣೆಯಾಗುತ್ತಿದೆ.

ಇದಲ್ಲದೆ, ಶಿಶುಪಾಲನಾ ಸೌಲಭ್ಯವು ಕಟ್ಟಡ ಕಾರ್ಮಿಕರು ವಾಸಿಸುವ ಮತ್ತು ಕೆಲಸ ನಿರ್ವಹಿಸುವ ಪ್ರದೇಶಗಳಲ್ಲಿ ಶಿಶುಪಾಲನಾ ಕೇಂದ್ರಗಳನ್ನು ತೆರೆದು 06 ತಿಂಗಳಿಂದ 06 ವರ್ಷದವರೆಗಿನ ಮಕ್ಕಳ ಪಾಲನಾ ಮತ್ತು ಪೋಷಣೆಯನ್ನು ಮಾಡಲಾಗುತ್ತಿದೆ. ಇದರಿಂದಾಗಿ ಮಕ್ಕಳ ಪೋಷಕರು ನೆಮ್ಮದಿಯಿಂದ ಕೆಲಸ ನಿರ್ವಹಿಸಲು ಸಹಾಯಕವಾಗಿರುತ್ತದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...