Tuesday, April 22, 2025
Tuesday, April 22, 2025

ವಿಶಿಷ್ಟ ನಟ ವಿಷ್ಣುವರ್ಧನ್

Date:

ಸಾಹಸ ಸಿಂಹ, ಅಭಿನಯ ಭಾರ್ಗವ, ಕೋಟಿಗೊಬ್ಬ ಹೀಗೆ ನಾನಾಬಿರುದುಗಳಿಂದ ಜನಪ್ರಿಯತೆ ಪಡೆದಿರುವ ಡಾ.ವಿಷ್ಣುವರ್ಧನ್ ಅವರ ಜನ್ಮದಿನ. ಸೆಪ್ಟಂಬರ್ 18 ವಿಷ್ಣುದಾದಾ ಅಭಿಮಾನಿಗಳಿಗೆ ವಿಶೇಷ ದಿನ. ವಿಷ್ಣುವರ್ಧನ್ ದೈಹಿಕವಾಗಿ ಇಲ್ಲದಿದ್ದರೂ ಅಭಿಮಾನಿಗಳ ಮನದಲ್ಲಿ ಇನ್ನು ಜೀವಂತ.

ಡಾ. ವಿಷ್ಣುವರ್ಧನ್ ಅವರು ಮೈಸೂರಿನಲ್ಲಿ ಜನಿಸಿದರು. ಇವರ ತಂದೆ ಹೆಚ್.ಎಲ್.ನಾರಾಯಣರಾವ್ ತಾಯಿ ಕಾಮಾಕ್ಷಮ್ಮ .

ಶಿವಶರಣ ನಂಬೆಯಕ್ಕ ಎಂಬ ಸಿನೆಮಾದಲ್ಲಿ 1955ರಲ್ಲಿ ಬಾಲ ನಟನಾಗಿ ಮೊದಲ ಬಾರಿಗೆ ನಟಿಸಿದ್ದರು.
ವಿಷ್ಣು ನಟನೆಯ ಈ ಸಿನೆಮಾ 28 ದಿನದಲ್ಲಿ ಚಿತ್ರೀಕರಣಗೊಂಡ ಮೊದಲ ಕನ್ನಡ ಸಿನೆಮಾ ಎಂಬ ಹಿರಿಮೆಗೆ ಪಾತ್ರವಾಗಿತ್ತು.

ನಾಯಕನ ಪಾತ್ರದಲ್ಲಿ ಇವರ ಮೊದಲ ಚಿತ್ರ 1972ರಲ್ಲಿ ಬಿಡುಗಡೆಯಾದ ಪುಟ್ಟಣ್ಣ ಕಣಗಾಲ್ ನಿರ್ದೇಶನದ ನಾಗರಹಾವು. ಸಂಪತ್ ಕುಮಾರನಾಗಿ ಬಂದಿದ್ದ ಹುಡುಗನಿಗೆ ಪುಟ್ಟಣ್ಣ ಕಣಗಾಲ್ ಅವರು ವಿಷ್ಣುವರ್ಧನ್ ಎಂದು ಹೆಸರಿಟ್ಟರು.

ಕನ್ನಡದ ಸಾಂಸಾರಿಕ ಸಮಸ್ಯೆಗಳ ಸುತ್ತಲಿನ ವಸ್ತು ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರಿಗೆ ಕರತಲಾಮಲಕ.
ಹಾಗೇ ಅವರ ಚಿತ್ರಗಳ ನಾಯಕನ ಆಯ್ಕೆಯೂ ವೈವಿಧ್ಯಮಯ.
ಅಂತಹ ಆಯ್ಕೆಗಳಲ್ಲಿ
ವಿಷ್ಣುವರ್ಧನ್ ಕೂಡ
ಕನ್ನಡಿಗರ ಹೃದಯಸಿಂಹಾಸನದಲ್ಲಿ ನೆಲೆನಿಂತ ನಟ.

1980ರಲ್ಲಿ ಶಂಕರ್ ನಾಗ್ ಕನಸಿನ ಪ್ರಾಜೆಕ್ಟ್ ಆದ ಮಾಲ್ಗುಡಿ ಡೇಸ್ನಲ್ಲಿ ಡಾ. ವಿಷ್ಣುವರ್ಧನ್ ನಟಿಸುವ ಮೂಲಕ ಕಿರುತೆರೆಯಲ್ಲಿ ಜನಪ್ರಿಯತೆಗಳಿಸಿದ್ದರು.

ಇವರು ನಟನೆಯಲ್ಲದೇ, ಕಿಲಾಡಿ ಕಿಟ್ಟು, ನಾಗ ಕಾಳ ಭೈರವ, ಸಾಹಸಸಿಂಹ , ಜಿಮ್ಮಿಗಲ್ಲು, ಖೈದಿ ಮೋಜುಗಾರ ಸೊಗಸುಗಾರ, ವಿಷ್ಣುಸೇನಾ ಇವೇ ಮೊದಲಾದ ಕೆಲವು ಚಿತ್ರಗಳಲ್ಲಿ ಹಿನ್ನೆಲೆ ಗಾಯನವನ್ನೂ ಕೂಡ ಮಾಡಿದ್ದರು.

ಕನ್ನಡ ಚಿತ್ರರಂಗದಲ್ಲೇ ಅತಿ ಹೆಚ್ಚು ದ್ವಿಪಾತ್ರಗಳಲ್ಲಿ ಕಾಣಿಸಿಕೊಂಡ ಹೆಗ್ಗಳಿಕೆ ವಿಷ್ಣು ದಾದಾ ಅವರು ಸಲ್ಲುತ್ತದೆ.

ಸಾಹಸ ಸಿಂಹ ವಿಷ್ಣುವರ್ಧನ್ ಕನ್ನಡ,ತೆಲುಗು, ತಮಿಳು, ಹಿಂದಿ ಹಾಗೂ ಮಲೆಯಾಳಂ ಭಾಷೆ ಸೇರಿದಂತೆ 220ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು.

ವಿಷ್ಣುವರ್ಧನ್ ದಕ್ಷಿಣ ಭಾರತದ ಖ್ಯಾತ ನಟಿ ಭಾರತಿ ಅವರನ್ನು ಮದುವೆಯಾದರು.

ಬೆಂಗಳೂರು ವಿಶ್ವವಿದ್ಯಾಲಯವು 2005ರಲ್ಲಿ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಕನ್ನಡದ ಮೇರು ನಟ ವಿಷ್ಣುವರ್ಧನ್ ಡಿಸೆಂಬರ್ 30, 2009ರಲ್ಲಿ ದೈವಾಧೀನರಾದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ravi Telex ಪತ್ರಕರ್ತ‌ “ಟೆಲೆಕ್ಸ್ ರವಿ ” ಗೆ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ

Ravi Telex ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ...

Inner Wheel East Shimoga ಆಶ್ರಮವಾಸಿಗಳ ಸೇವೆ ,ದೇವರ ಸೇವೆಗೆ ಸಮ- ವಾಗ್ದೇವಿ ಬಸವರಾಜ್

Inner Wheel East Shimoga ಆಶ್ರಮವಾಸಿಗಳ ಸೇವೆ ದೇವರ ಸೇವೆಗೆ ಸಮಾನ....

Dr. Raj Kumar ಡಾ.ರಾಜ್ ಅಭಿನಯದ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ

Dr. Raj Kumar ವರನಟ ಡಾ ರಾಜ್ ಕುಮಾರ್ ರವರ ಜನ್ಮದಿನಾಚರಣೆ...

S.N.Chennabasappa ಜನಿವಾರ ತೆಗೆಸಿದ ಪ್ರಕರಣ, ಘಟನೆ‌ಮುಂದೆ ತಪ್ಪಿಸಲು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ವಿಪ್ರ ಸಂಘಟನೆಯ ಮನವಿ

S.N.Chennabasappa ಶಿವಮೊಗ್ಗದ ದುರ್ಗಿಗುಡಿಯ ಶ್ರೀ ರಾಘವೇಂದ್ರ ಸ್ವಾಮಿ ಮಠದಿಂದ ಜಿಲ್ಲಾಧಿಕಾರಿ...