Sunday, December 7, 2025
Sunday, December 7, 2025

ಮಂಗಳೂರಿನ ದಸರಾ ಶಾರದೆಗೆ ಚಿನ್ನದ ಜರಿ ಮೆರುಗು

Date:

ಈ ಬಾರಿ ದಸರಾ ಮಹೋತ್ಸವದಲ್ಲಿ ಮಂಗಳೂರಿನ ರಥಬೀದಿ ಶಾರದೆ 8 ಲಕ್ಷ ರೂ. ಮೌಲ್ಯದ ಚಿನ್ನದ ಜರಿ ಸೀರೆಯೊಂದಿಗೆ ಮಿಂಚಲಿದ್ದಾಳೆ. ಈ ಸೀರೆಯನ್ನು ವಾರಣಾಸಿ ಜ್ಞಾನವ್ಯಾಪಿ ದೇಗುಲ ಬಳಿಯ ಮುಸ್ಲಿಂ ಕುಟುಂಬವೊಂದು ಕಳೆದ 6 ತಿಂಗಳಿನಿಂದ ತಯಾರಿಸುತ್ತಿದೆ.

ಪ್ರತಿವರ್ಷ ಶಾರದೆಯ ಶೋಭಾಯಾತ್ರೆ ಸಂದರ್ಭ ಬೆಳ್ಳಿಯ ಜರಿಯಿರುವ ರೇಷ್ಮೆ ಸೀರೆಯನ್ನು ಶಾರದಾ ದೇವಿಗೆ ಉಡಿಸಲಾಗುತ್ತಿದ್ದು, ನಗರದ ದಾನಿಯೊಬ್ಬರು ಈ ಸೀರೆಯನ್ನು ಕೊಡುಗೆಯಾಗಿ ನೀಡುತ್ತಾ ಬಂದಿದ್ದಾರೆ. ಹಲವು ವರ್ಷಗಳಿಂದ ವಾರಣಾಸಿ ಮುಸ್ಲಿಂ ಕುಟುಂಬವೇ ಈ ಸೀರೆಯನ್ನು ತಯಾರಿಸುತ್ತಿದ್ದು, ಈ ಬಾರಿ ಶಾರದೆಯ ಸೀರೆ ತಯಾರಿಸುವವರು ಆ ಕುಟುಂಬದ 5ನೇ ತಲೆಮಾರಿನವರಾಗಿದ್ದಾರೆ.

ಮಂಗಳೂರು ಶಾರದಾ ಮಹೋತ್ಸವದ ಶತಮಾನೋತ್ಸವದ ಈ ಪರ್ವಕಾಲದಲ್ಲಿ ಶಾರದಾ ಮಹೋತ್ಸವ ಸಮಿತಿ ಮತ್ತು ಭಕ್ತಾದಿಗಳು ಒಟ್ಟು ಸೇರಿ 200 ಪವನ್‌ ತೂಕದ ಸ್ವರ್ಣಾಭರಣಗಳನ್ನು ಸಮರ್ಪಿಸಲಿದ್ದಾರೆ. ಅದರಲ್ಲಿ ಶಾರದೆಗೆ ಚಿನ್ನದ ವೀಣೆ, ನವಿಲೂ ಸೇರಿದೆ. ಇದು ಮಾತ್ರವಲ್ಲದೆ ಶಾರದೆಗೆ ರಜತ ಬೆಳ್ಳಿ ದೀಪಗಳು ಸಮರ್ಪಣೆಯಾಗುತ್ತಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ನಿವೃತ್ತ ಅಧ್ಯಾಪಕರಿಗೆ ಪಂಚಣಿ ಪರಿಷ್ಕರಣೆಯಿಂದ ಅನ್ಯಾಯ, ಸರಿಪಡಿಸಲು ಆಗ್ರಹ

ನಿವೃತ್ತ ಅಧ್ಯಾಪಕರಿಗೆ ಆಗುವ ಅನ್ಯಾಯವನ್ನು ಸರಿಪಡಿಸುವಂತೆ ಜಿಲ್ಲಾ ವಿಶ್ವವಿದ್ಯಾಲಯ ಮತ್ತು ಪದವಿ...

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...