Sunday, August 23, 2026
Sunday, August 23, 2026

ಮಂಗಳೂರಿನ ದಸರಾ ಶಾರದೆಗೆ ಚಿನ್ನದ ಜರಿ ಮೆರುಗು

Date:

ಈ ಬಾರಿ ದಸರಾ ಮಹೋತ್ಸವದಲ್ಲಿ ಮಂಗಳೂರಿನ ರಥಬೀದಿ ಶಾರದೆ 8 ಲಕ್ಷ ರೂ. ಮೌಲ್ಯದ ಚಿನ್ನದ ಜರಿ ಸೀರೆಯೊಂದಿಗೆ ಮಿಂಚಲಿದ್ದಾಳೆ. ಈ ಸೀರೆಯನ್ನು ವಾರಣಾಸಿ ಜ್ಞಾನವ್ಯಾಪಿ ದೇಗುಲ ಬಳಿಯ ಮುಸ್ಲಿಂ ಕುಟುಂಬವೊಂದು ಕಳೆದ 6 ತಿಂಗಳಿನಿಂದ ತಯಾರಿಸುತ್ತಿದೆ.

ಪ್ರತಿವರ್ಷ ಶಾರದೆಯ ಶೋಭಾಯಾತ್ರೆ ಸಂದರ್ಭ ಬೆಳ್ಳಿಯ ಜರಿಯಿರುವ ರೇಷ್ಮೆ ಸೀರೆಯನ್ನು ಶಾರದಾ ದೇವಿಗೆ ಉಡಿಸಲಾಗುತ್ತಿದ್ದು, ನಗರದ ದಾನಿಯೊಬ್ಬರು ಈ ಸೀರೆಯನ್ನು ಕೊಡುಗೆಯಾಗಿ ನೀಡುತ್ತಾ ಬಂದಿದ್ದಾರೆ. ಹಲವು ವರ್ಷಗಳಿಂದ ವಾರಣಾಸಿ ಮುಸ್ಲಿಂ ಕುಟುಂಬವೇ ಈ ಸೀರೆಯನ್ನು ತಯಾರಿಸುತ್ತಿದ್ದು, ಈ ಬಾರಿ ಶಾರದೆಯ ಸೀರೆ ತಯಾರಿಸುವವರು ಆ ಕುಟುಂಬದ 5ನೇ ತಲೆಮಾರಿನವರಾಗಿದ್ದಾರೆ.

ಮಂಗಳೂರು ಶಾರದಾ ಮಹೋತ್ಸವದ ಶತಮಾನೋತ್ಸವದ ಈ ಪರ್ವಕಾಲದಲ್ಲಿ ಶಾರದಾ ಮಹೋತ್ಸವ ಸಮಿತಿ ಮತ್ತು ಭಕ್ತಾದಿಗಳು ಒಟ್ಟು ಸೇರಿ 200 ಪವನ್‌ ತೂಕದ ಸ್ವರ್ಣಾಭರಣಗಳನ್ನು ಸಮರ್ಪಿಸಲಿದ್ದಾರೆ. ಅದರಲ್ಲಿ ಶಾರದೆಗೆ ಚಿನ್ನದ ವೀಣೆ, ನವಿಲೂ ಸೇರಿದೆ. ಇದು ಮಾತ್ರವಲ್ಲದೆ ಶಾರದೆಗೆ ರಜತ ಬೆಳ್ಳಿ ದೀಪಗಳು ಸಮರ್ಪಣೆಯಾಗುತ್ತಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...