Wednesday, February 4, 2026
Wednesday, February 4, 2026

ಪಡಿತರ ಸಮಸ್ಯೆಗೆ ಸ್ಪಂದಿಸದ ಸರ್ಕಾರದ ಬಗ್ಗೆ ಬೇಸತ್ತ ಪರಿಸರ ಪ್ರೇಮಿ ಆತ್ಮಹತ್ಯೆ

Date:

ಪರಿಸರ ಪ್ರೇಮಿ, ಸಾಲುಮರದ ವೀರಾಚಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹರಿಹರ ತಾಲೂಕಿನ ಮಿಟ್ಲಕಟ್ಟೆ ಗ್ರಾಮದಲ್ಲಿ ನಡೆದಿದೆ.

ದಾವಣಗೆರೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸುಮಾರು 3 ಸಾವಿರ ಮರಗಳನ್ನ ವೀರಾಚಾರಿ ಬೆಳೆಸಿದ್ದರು.
ನಿತ್ಯ ಪರಿಸರ ಹಾಗೂ ಮರಗಳ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು. ರಾಜ್ಯೋತ್ಸವ ಸೇರಿದಂತೆ ಹಲವು ಪ್ರಶಸ್ತಿಗಳಿಗೂ ಭಾಜನರಾಗಿದ್ದರು. ಮಿಟ್ಲಕಟ್ಟೆಯಲ್ಲಿ ಪಡಿತರ ವಿತರಣೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ವೀರಾಚಾರಿ ಅವರು ಹೊರಾಟ ನಡೆಸುತ್ತಿದ್ದರು.
ಆದರೆ ನ್ಯಾಯ ಸಿಗಲಿಲ್ಲ ಎಂದು ಮನನೊಂದು ಮರಕ್ಕೆ ನೇಣಿಗೆ ಶರಣಾಗಿದ್ದಾರೆ.

ನಿಗದಿತ ಪಡಿತರ ಕೊಡದೆ ಕಡಿಮೆ ಕೊಡಲಾಗುತ್ತಿದೆ. ಜನರಿಗೆ ಮೋಸ ಮಾಡಲಾಗುತ್ತಿದೆ. ಈ ಅವ್ಯವಸ್ಥೆಯನ್ನ ಸರಿ ಪಡಿಸಬೇಕೆಂದು ಆಗ್ರಹಿಸಿ ಕಳೆದ ಎರಡು ವರ್ಷದಿಂದ ವೀರಾಚಾರಿ ಹೋರಾಟ ನಡೆಸುತ್ತಿದ್ದರು.

ಇತ್ತೀಚೆಗೆ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿಯನ್ನೂ ಸಲ್ಲಿಸಿದ್ದರು. ಹೋರಾಟಕ್ಕೆ ನ್ಯಾಯ ಸಿಗಲಿಲ್ಲ ಎಂದು ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹರಿಹರ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...