Monday, March 23, 2026
Monday, March 23, 2026

ಮರಣದಂಡನೆ ಶಿಕ್ಷಾವಿಧಿ ಸ್ವರೂಪ ಕುರಿತು ಪರಿಶೀಲನೆ- ದ್ವಿಸದಸ್ಯ ಪೀಠ

Date:

ಮರಣ ದಂಡನೆ ಶಿಕ್ಷೆಗೆ ಒಳಪಡಿಸಬಹುದಾದ ಪ್ರಕರಣಗಳಲ್ಲಿ ನ್ಯಾಯಾಲಯಗಳು ಹೇಗೆ ಮತ್ತು ಯಾವ ಸಂದರ್ಭಗಳಲ್ಲಿ ಶಿಕ್ಷೆಯ ಪ್ರಮಾಣ ತಗ್ಗಿಸಬಹುದು ಎಂಬ ಬಗ್ಗೆ ಮಾರ್ಗಸೂಚಿ ರೂಪಿಸುವ ಕುರಿತ ಸುಮೋಟೊ ಅರ್ಜಿಯೊಂದನ್ನು ಸುಪ್ರೀಂ ಕೋರ್ಟ್‌ ಸೋಮವಾರ ಐವರು ನ್ಯಾಯಮೂರ್ತಿಗಳನ್ನೊಳಗೊಂಡ ಸಂವಿಧಾನ ಪೀಠಕ್ಕೆ ವರ್ಗಾಯಿಸಿದೆ.

ಮರಣ ದಂಡನೆ ಶಿಕ್ಷೆಗೆ ಒಳಪಡಬಹುದಾದ ಅಪರಾಧಿಯ ಶಿಕ್ಷೆಯನ್ನು ಎಂತಹ ಸಂದರ್ಭಗಳಲ್ಲಿ ತಗ್ಗಿಸಬೇಕು ಎಂಬುದರ ಕುರಿತು ಸ್ಪಷ್ಟತೆ ಹಾಗೂ ಏಕರೂಪತೆ ಬೇಕಿದೆ. ಈ ವಿಚಾರದ ಬಗ್ಗೆ ವಿಸ್ತೃತ ಪೀಠದಲ್ಲೇ ವಿಚಾರಣೆ ನಡೆಯುವ ಅಗತ್ಯವಿದೆ’ ಎಂದು ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌ ನೇತೃತ್ವದ ದ್ವಿಸದಸ್ಯ ಪೀಠ ಹೇಳಿತು.

ಈ ವಿಚಾರವನ್ನು ಮುಖ್ಯ ನ್ಯಾಯಮೂರ್ತಿಗಳ ಎದುರು ಇಡಬಯಸುತ್ತೇನೆ. ಈ ಸಂಬಂಧ ಅವರೇ ಸೂಕ್ತ ಆದೇಶ ಹೊರಡಿಸಲಿ ಎಂದು ನ್ಯಾಯಮೂರ್ತಿ ಎಸ್‌.ರವೀಂದ್ರ ಭಟ್‌ ಅವರು ತೀರ್ಪು ಪ್ರಕಟಿಸುವಾಗ ತಿಳಿಸಿದರು.

ಆಗಸ್ಟ್‌ 17ರಂದು ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಪೀಠವು ಮರಣ ದಂಡನೆ ಶಿಕ್ಷೆಯು ಬದಲಾಯಿಸಲು ಆಗದ್ದು. ಹೀಗಾಗಿ ಶಿಕ್ಷೆಯನ್ನು ತಗ್ಗಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡುವ ಎಲ್ಲಾ ಅವಕಾಶಗಳನ್ನೂ ಅಪರಾಧಿಗೆ ನೀಡಬೇಕು ಎಂದು ಆಗ ಹೇಳಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sagara News ಸಾಗರದಲ್ಲಿ “ಕ್ಯಾಂಪಸ್ ಕಟ್ಟೆ”.ಸಾಧಕಿಯರ ಬಗ್ಗೆ ವಿದ್ಯಾರ್ಥಿನಿಯರಿಂದ ಪರಿಚಯ.

Sagara News ಮಹಿಳಾ ಸಬಲೀಕರಣ ಪ್ರಾಮುಖ್ಯತೆ ಪಡೆಯುತ್ತಿರುವ ಅದೂ ಮಹಿಳಾ ದಿನಾಚರಣೆಯ...

Bakkeshwara Swamy Rathotsava ದಾವಣಗೆರೆ ಹೃದಯಭಾಗದ ರಾಜಬೀದಿಯ ಏಕೈಕವಾದ ಶ್ರೀಬಕ್ಕೇಶ್ವರ ಮಹಾರಥೋತ್ಸವ. ...

Bakkeshwara Swamy Rathotsava ದಾವಣಗೆರೆಯು ಅನಾದಿಕಾಲದಿಂದಲೂ ವ್ಯಾಪಾರೋದ್ಯಮಕ್ಕೆ ಪ್ರಸಿದ್ಧವಾದ ಕೇಂದ್ರವಾಗಿದ್ದು 1801...

KFD ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷಎರಡನೇ ಬಲಿ.

KFD ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಟ್ಟಿಕೇವಿಯಲ್ಲಿ ಮಂಗನ ಕಾಯಿಲೆಗೆ ಈ...

Cheetah Attack ಮುತ್ತಗಿ ಗ್ರಾಮದ ರೈತನ ಮೇಲೆ ಚಿರತೆ ಹಠಾತ್ ದಾಳಿ. ಮೆಗ್ಗಾನ್ ಆಸ್ಪತ್ರೆಗೆ ರೈತ ದಾಖಲು.

Cheetah Attack ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ, ಮುತ್ತಗಿ ಗ್ರಾಮದ ರೈತರ...