Sunday, December 7, 2025
Sunday, December 7, 2025

ಮಂಗಳೂರು ದಸರಾಗೆ ರಾಜ್ಯ ಸಾರಿಗೆ ನಿಗಮದಿಂದ ವಿಶೇಷ ಪ್ಯಾಕೇಜ್

Date:

ಮೈಸೂರು ಬಳಿಕ ಇದೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ ‘ಮಂಗಳೂರು ದಸರಾ ದರ್ಶನ’ ಹೆಸರಿನಲ್ಲಿ ಸೆ.26ರಿಂದ ಅ.5ರ ವರೆಗೆ ಪ್ಯಾಕೇಜ್‌ ಪ್ರವಾಸ ಆಯೋಜಿಸಲಾಗಿದೆ.

ದಸರಾ ವೇಳೆ ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳಿಗೆ ಧಾರ್ಮಿಕ ಪ್ರವಾಸ ಇದರ ಉದ್ದೇಶವಾಗಿದೆ.

ಸುಮಾರು 10 ವಿವಿಧ ದೇವಸ್ಥಾನಗಳಿಗೆ ಈ ಪ್ಯಾಕೇಜ್‌ ಪ್ರವಾಸ ಇರಲಿದ್ದು, ಊಟ, ಉಪಹಾರ ಹೊರತುಪಡಿಸಿ ಪ್ರತಿ ಪ್ರಯಾಣಿಕರಿಗೆ ಕನಿಷ್ಠ ದರ ನಿಗದಿಪಡಿಸಲಾಗಿದೆ. ಒಂದು ದಿನದ ಪ್ರವಾಸ ಇದಾಗಿದ್ದು, ಬೆಳಗ್ಗೆ ಹೊರಟರೆ, ದೇವಸ್ಥಾನಗಳ ದರ್ಶನ ಮುಗಿಸಿ ಸಂಜೆ ವೇಳೆಗೆ ವಾಪಸ್‌ ಆಗಬಹುದು.

ಹಸಿರು ಬಣ್ಣದ ನರ್ಮ್‌ ಬಸ್‌ನ್ನು ಇದಕ್ಕೆ ಪ್ರಾಯೋಗಿಕವಾಗಿ ಬಳಸಲಾಗುತ್ತಿದ್ದು, ಒಂದು ಬಸ್‌ನಲ್ಲಿ 40 ಮಂದಿಗೆ ಅವಕಾಶ ಇರುತ್ತದೆ. ಬೆಳಗ್ಗೆ 8 ಗಂಟೆಗೆ ಬಿಜೈ ಬಸ್‌ ನಿಲ್ದಾಣದಿಂದ ಹೊರಟರೆ, ರಾತ್ರಿ 8.30ಕ್ಕೆ ನಿಲ್ದಾಣಕ್ಕೆ ಮರಳಲಿದೆ. ಚಾಲಕನಲ್ಲದೆ, ಓರ್ವ ಸಹಾಯಕನೂ ಇರಲಿದ್ದಾರೆ.

ಈಗಾಗಲೇ ಆನ್‌ಲೈನ್‌ ಮೂಲಕ ಟಿಕೆಟ್‌ ಬುಕ್ಕಿಂಗ್‌(9663211553) ಆರಂಭಿಸಲಾಗಿದೆ.

ಅಲ್ಲದೆ ಬಸ್‌ ಹೊರಡುವ ಮುನ್ನ ಸ್ಥಳದಲ್ಲೇ ಟಿಕೆಟ್‌ ಕೂಡ ನೀಡಲಾಗುತ್ತದೆ. ವಯಸ್ಕರಿಗೆ 300 ರೂ. ಹಾಗೂ 6 ವರ್ಷ ಮೇಲ್ಪಟ್ಟಮಕ್ಕಳಿಗೆ 250 ರು. ನಿಗದಿಪಡಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...