Monday, March 23, 2026
Monday, March 23, 2026

ವಿಶ್ವ ಹಿರಿಯರ ದಿನಾಚರಣೆಗೆ ವಿವಿಧ ಸ್ಪರ್ಧೆಗಳ ಆಯೋಜನೆ

Date:

2022 ರ ಅಕ್ಟೋಬರ್ 1 ರಂದು ನಡೆಯಲಿರುವ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಹಿರಿಯ ನಾಗರೀಕರಿಗೆ ಜಿಲ್ಲಾ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪಧೆಗಳನ್ನು ಸೆ.25 ರ ಭಾನುವಾರ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.

ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವ ಸ್ಪರ್ಧಾರ್ಥಿಗಳು 60 ವರ್ಷ ಮೇಲ್ಪಟ್ಟವರಾಗಿದ್ದು, ಆಧಾರ್ ಕಾರ್ಡ್ ಮತ್ತು ಹಿರಿಯ ನಾಗರಿಕರ ಗುರುತಿನ ಚೀಟಿಯೊಂದಿಗೆ ಸೆ.23 ರೊಳಗಾಗಿ ನಾಗರಿಕರ ಸಹಾಯವಾಣಿ ಕೇಂದ್ರ, ಡಿವೈಎಸ್‍ಪಿ ಕಚೇರಿ ಆವರಣ ಶಿವಮೊಗ್ಗ ಇಲ್ಲಿ ನೋಂದಣಿ ಮಾಡಿಸಿಕೊಳ್ಳತಕ್ಕದ್ದು. ನೋಂದಣಿಗಾಗಿ ಯುವರಾಜ ಮೊಬೈಲ್ ಸಂಖ್ಯೆ 9632570371, ಚಂದ್ರು 9108984207, ದೂ.ಸಂ: 08182-260424 ನ್ನು ಸಂಪರ್ಕಿಸಬಹುದು.

ಕ್ರೀಡಾ ಸ್ಪರ್ಧೆಗಳು : ಪುರುಷರಿಗೆ 60 ರಿಂದ 69 ವರ್ಷದವರು, 70 ರಿಂದ 79 ವರ್ಷದವರು ಮತ್ತು 80 ವರ್ಷ ಮೇಲ್ಪಟ್ಟವರಿಗೆ ಪ್ರತ್ಯೇಕವಾಗಿ ನಡಿಗೆ, ರಿಂಗ್‍ನ್ನು ಬಕೆಟ್‍ನಲ್ಲಿ ಎಸೆಯುವುದು, ಮ್ಯೂಸಿಕಲ್ ಚೇರ್ಸ್ ಸ್ಪರ್ಧೆಯನ್ನು ಮತ್ತು ಮಹಿಳೆಯರಿಗೆ 60 ರಿಂದ 69 ವರ್ಷದವರು, 70 ರಿಂದ 79 ವರ್ಷದವರು ಮತ್ತು 80 ವರ್ಷ ಮೇಲ್ಪಟ್ಟವರಿಗೆ ಪ್ರತ್ಯೇಕವಾಗಿ ನಡಿಗೆ, ರಿಂಗ್‍ನ್ನು ಬಕೆಟ್‍ನಲ್ಲಿ ಎಸೆಯುವುದು, ಮ್ಯೂಸಿಕಲ್ ಚೇರ್ಸ್ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ

ಸಾಂಸ್ಕೃತಿಕ ಸ್ಪರ್ಧೆಗಳು : ಪುರುಷರಿಗೆ 60 ರಿಂದ 69 ವರ್ಷದವರು, 70 ರಿಂದ 79 ವರ್ಷದವರು ಮತ್ತು 80 ವರ್ಷ ಮೇಲ್ಪಟ್ಟವರಿಗೆ ಪ್ರತ್ಯೇಕವಾಗಿ ಏಕಪಾತ್ರಾಭಿನಯ, ಗಾಯನ ಸ್ಪರ್ಧೆ ಮತ್ತು ಚಿತ್ರಕಲೆ ಸ್ಪರ್ಧೆಗಳು ಮತ್ತು ಮಹಿಳೆಯರಿಗೆ 60 ರಿಂದ 69 ವರ್ಷದವರು, 70 ರಿಂದ 79 ವರ್ಷದವರು ಮತ್ತು 80 ವರ್ಷ ಮೇಲ್ಪಟ್ಟವರಿಗೆ ಪ್ರತ್ಯೇಕವಾಗಿ ಏಕಪಾತ್ರಾಭಿನಯ, ಗಾಯನ ಸ್ಪರ್ಧೆ ಮತ್ತು ಚಿತ್ರಕಲೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sagara News ಸಾಗರದಲ್ಲಿ “ಕ್ಯಾಂಪಸ್ ಕಟ್ಟೆ”.ಸಾಧಕಿಯರ ಬಗ್ಗೆ ವಿದ್ಯಾರ್ಥಿನಿಯರಿಂದ ಪರಿಚಯ.

Sagara News ಮಹಿಳಾ ಸಬಲೀಕರಣ ಪ್ರಾಮುಖ್ಯತೆ ಪಡೆಯುತ್ತಿರುವ ಅದೂ ಮಹಿಳಾ ದಿನಾಚರಣೆಯ...

Bakkeshwara Swamy Rathotsava ದಾವಣಗೆರೆ ಹೃದಯಭಾಗದ ರಾಜಬೀದಿಯ ಏಕೈಕವಾದ ಶ್ರೀಬಕ್ಕೇಶ್ವರ ಮಹಾರಥೋತ್ಸವ. ...

Bakkeshwara Swamy Rathotsava ದಾವಣಗೆರೆಯು ಅನಾದಿಕಾಲದಿಂದಲೂ ವ್ಯಾಪಾರೋದ್ಯಮಕ್ಕೆ ಪ್ರಸಿದ್ಧವಾದ ಕೇಂದ್ರವಾಗಿದ್ದು 1801...

KFD ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷಎರಡನೇ ಬಲಿ.

KFD ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಟ್ಟಿಕೇವಿಯಲ್ಲಿ ಮಂಗನ ಕಾಯಿಲೆಗೆ ಈ...

Cheetah Attack ಮುತ್ತಗಿ ಗ್ರಾಮದ ರೈತನ ಮೇಲೆ ಚಿರತೆ ಹಠಾತ್ ದಾಳಿ. ಮೆಗ್ಗಾನ್ ಆಸ್ಪತ್ರೆಗೆ ರೈತ ದಾಖಲು.

Cheetah Attack ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ, ಮುತ್ತಗಿ ಗ್ರಾಮದ ರೈತರ...