Thursday, March 19, 2026
Thursday, March 19, 2026

ವಿಜ್ಞಾನ ನಾಟಕ ಸ್ಪರ್ಧೆ-ಡಿ.ಬಿ.ಹಳ್ಳಿ ಶಾಲೆ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Date:

ವಿಜ್ಞಾನ ನಾಟಕ ಸ್ಪರ್ಧೆ ಅಪ್ಪಟ ಗ್ರಾಮೀಣ ಪ್ರತಿಭೆ ಪದ್ಮದೀಪ ಪಬ್ಲಿಕ್ ಶಾಲೆಯವಿದ್ಯಾರ್ಥಿಗಳು ವಿಭಾಗ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಉತ್ತಮ ನಟಿ ಅನುಶ್ರೀ ಉತ್ತಮ ನಿರ್ದೇಶಕ ಅಜಯ್ ನಿನಾಸಂ, ಪದ್ಮ ದೀಪ ಪಬ್ಲಿಕ್ ಶಾಲೆ ಪ್ರಥಮ ಸ್ಥಾನ
ವಿಜ್ಞಾನ ವಿಷಯದಲ್ಲಿ ಮಕ್ಕಳಿಗೆ ಪ್ರಯೋಗಾತ್ಮಕವಾದ ನೈಜ ಅನುಭವ ದೊರಕಲು ರಂಗಭೂಮಿಯನ್ನು ಮಾಧ್ಯಮವನ್ನಾಗಿಸಿಕೊಂಡು ಸಮಾಜಕ್ಕೆ ಉತ್ತಮ ಸಂದೇಶವನ್ನು ಹಾಗೂ ಸ್ವತಃ ವಿದ್ಯಾರ್ಥಿಗಳು ವೈಜ್ಞಾನಿಕವಾಗಿ ವೈಚಾರಿಕ ದೃಷ್ಟಿಕೋನವನ್ನು ಬೆಳೆಸಿಕೊಳ್ಳಲು ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕರ್ನಾಟಕ ಸರ್ಕಾರ ವಿಜ್ಞಾನ ನಾಟಕವನ್ನು ಹಮ್ಮಿಕೊಂಡಿದ್ದು ವಿಭಾಗ ಮಟ್ಟದ ವಿಜ್ಞಾನ ನಾಟಕ ಹಾಸನ ಜಿಲ್ಲೆಯ ಡಯಟ್ ನವರು ನಡೆಸಿದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಭದ್ರಾವತಿ ತಾಲೂಕು ಡಿ ಬಿ ಹಳ್ಳಿ ಗ್ರಾಮದ ಪದ್ಮ ದೀಪ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಬೇಸಿಕ್ ಸೈನ್ಸ್ ಫಾರ್ ಸಸ್ಟೈನಬಲ್ ಲೈಫ್ ಎಂಬ ಮುಖ್ಯ ವಿಷಯ ಆಧಾರಿತ ಕರೋನ ಪ್ಯಾಡೆಮಿಕ್ ಸೋಶಿಯಲ್ ಎಫೆಕ್ಟ್ ಎಂಬ ವಿಷಯವನಾಧರಿಸಿ ಅಜಯ್ ಗೌಡ ನೀನಾಸಂ ರಚಿಸಿ ನಿರ್ದೇಶಿಸಿದ ನಾಟಕ ಡೇರ್ ಡೇವಿಲ್ ವೈರಸ್ ಭೂಮಿಗೆ ನೂರೆಂಟು ಸರ್ಕಸ್ಸು ನಾಟಕವನ್ನು ಪದ್ಮದೀಪ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಾದ ಅನುಶ್ರೀ ಧನ್ಯಶ್ರೀ ಭೂಮಿಕಾ ಧೀಮಂತ್ ಭುವನ್ ಮಹಮ್ಮದ್ ರಫೀಕ್ ಪ್ರಜ್ವಲ್ ರುದ್ರೇಶ್ ಹೇಮಂತ್ ಇವರು ಮನೋಜ್ಞವಾಗಿ ಅಭಿನಯಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ
ಗ್ರಾಮೀಣ ಭಾಗದ ಮಕ್ಕಳು ತಮ್ಮ ಪ್ರತಿಭೆಯ ಮೂಲಕ ನಗರ ಭಾಗದ ವಿದ್ಯಾರ್ಥಿಗಳಿಗೂ ಪೈಪೋಟಿ ನೀಡಿ 13 ವರ್ಷಗಳ ವಿಜ್ಞಾನ ನಾಟಕ ಪ್ರದರ್ಶನದಲ್ಲಿ ಇದೇ ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲೆಯ ಪದ್ಮ ದೀಪ ಪಬ್ಲಿಕ್ ಸ್ಕೂಲ್, ಪ್ರಥಮ ಸ್ಥಾನ ಪಡೆಯುವುದರ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ ಈ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ಸಾರುವ ನಾಟಕವನ್ನು ನೀಡಿ ಮಾದರಿಯಾಗಿದ್ದಾರೆ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಕಿರಣ್ ಕುಮಾರ್ ಎಸ್ ಯು ರವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ ಪ್ರಾಂಶುಪಾಲರಾದ ತಂಗರಾಜು ಕೆ ರವರು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸೌಲಭ್ಯಗಳನ್ನು ಒದಗಿಸಿದರೆ ಎಂತಹ ಸಾಧನೆಯನ್ನಾದರೂ ಮಾಡಬಹುದು ಎನ್ನುವುದನ್ನು ನಮ್ಮ ವಿದ್ಯಾರ್ಥಿಗಳು ಸಾಬೀತುಪಡಿಸಿ ಶಿವಮೊಗ್ಗ ಜಿಲ್ಲೆಯನ್ನು ರಾಜ್ಯಮಟ್ಟ ಪ್ರತಿನಿಧಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ಶ್ರಮವಹಿಸಿ ವಿಜೇತರಾದ ಎಲ್ಲ ವಿದ್ಯಾರ್ಥಿಗಳಿಗೂ ಸಂಸ್ಥೆ ಪರವಾಗಿ ಹಾಗೂ ಶಾಲಾ ಸಿಬ್ಬಂದಿ ವರ್ಗದ ಪರವಾಗಿ ಅಭಿನಂದನೆಗಳನ್ನು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...