Thursday, March 19, 2026
Thursday, March 19, 2026

ಹೊರ ರಾಜ್ಯದ ಪ್ರವಾಸಿಗರ ವಾಹನಕ್ಕೆ ದಸರಾ ವಿಶೇಷ ತೆರಿಗೆ ವಿನಾಯಿತಿ

Date:

ವಿಶ್ವವಿಖ್ಯಾತ ಮೈಸೂರು ದಸರಾ ಗೆ ತೆರಳುವಂತ ಹೊರ ರಾಜ್ಯದ ಪ್ರವಾಸಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿ, ರಾಜ್ಯ ಸರ್ಕಾರ ವಾಹನ ತೆರಿಗೆಯಿಂದ ವಿನಾಯ್ತಿಯನ್ನು ಘೋಷಣೆ ಮಾಡಿದೆ.

ಈ ಕುರಿತಂತೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದೆ. ಸಾರ್ವಜನಿಕರ ಹಿತದೃಷ್ಠಿಯಿಂದ, ಕರ್ನಾಟಕ ಹೊರತುಪಡಿಸಿ. ಇತರೆ ರಾಜ್ಯಗಳಲ್ಲಿ ನೋಂದಾಯಿಸಲ್ಪಟ್ಟ ಮತ್ತು ಆ ರಾಜ್ಯದಲ್ಲಿ ತೆರಿಗೆ ಪಾವತಿಸಿರುವ ವಾಹನಗಳಿಗೆ ತೆರಿಗೆ ಪಾವತಿಯಿಂದ ವಿನಾಯ್ತಿ ನೀಡಲು ಸರ್ಕಾರವು ತೀರ್ಮಾನಿಸಿದೆ ಎಂದಿದ್ದಾರೆ.

ಸರ್ಕಾರದ ತೀರ್ಮಾನದಂತೆ ವಿಶೇಷ ರಹದಾರಿ ಪಡೆದು ದಿನಾಂಕ 29-09-2022ರಿಂದ ದಿನಾಂಕ 06-10-2022ರ ನಡೆಯಲಿರುವ ದಸರಾ ಮಹೋತ್ಸವಕ್ಕೆ ಅಂತರ ರಾಜ್ಯದಿಂದ ಮೈಸೂರು ನಗರಕ್ಕೆ ಹಾಗೂ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕು ವ್ಯಾಪ್ತಿಯ ಕೃಷ್ಣರಾಜ್ಯ ಸಾಗರ ಜಲಾಶಯ ವೀಕ್ಷಿಸಲು ಆಗಮಿಸುವ ಪ್ರವಾಸಿ ವಾಹನಗಳಿಗೆ ಮಾತ್ರ ಅನ್ವಯಿಸುವಂತೆ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...