Wednesday, July 8, 2026
Wednesday, July 8, 2026

ಹೊರ ರಾಜ್ಯದ ಪ್ರವಾಸಿಗರ ವಾಹನಕ್ಕೆ ದಸರಾ ವಿಶೇಷ ತೆರಿಗೆ ವಿನಾಯಿತಿ

Date:

ವಿಶ್ವವಿಖ್ಯಾತ ಮೈಸೂರು ದಸರಾ ಗೆ ತೆರಳುವಂತ ಹೊರ ರಾಜ್ಯದ ಪ್ರವಾಸಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿ, ರಾಜ್ಯ ಸರ್ಕಾರ ವಾಹನ ತೆರಿಗೆಯಿಂದ ವಿನಾಯ್ತಿಯನ್ನು ಘೋಷಣೆ ಮಾಡಿದೆ.

ಈ ಕುರಿತಂತೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದೆ. ಸಾರ್ವಜನಿಕರ ಹಿತದೃಷ್ಠಿಯಿಂದ, ಕರ್ನಾಟಕ ಹೊರತುಪಡಿಸಿ. ಇತರೆ ರಾಜ್ಯಗಳಲ್ಲಿ ನೋಂದಾಯಿಸಲ್ಪಟ್ಟ ಮತ್ತು ಆ ರಾಜ್ಯದಲ್ಲಿ ತೆರಿಗೆ ಪಾವತಿಸಿರುವ ವಾಹನಗಳಿಗೆ ತೆರಿಗೆ ಪಾವತಿಯಿಂದ ವಿನಾಯ್ತಿ ನೀಡಲು ಸರ್ಕಾರವು ತೀರ್ಮಾನಿಸಿದೆ ಎಂದಿದ್ದಾರೆ.

ಸರ್ಕಾರದ ತೀರ್ಮಾನದಂತೆ ವಿಶೇಷ ರಹದಾರಿ ಪಡೆದು ದಿನಾಂಕ 29-09-2022ರಿಂದ ದಿನಾಂಕ 06-10-2022ರ ನಡೆಯಲಿರುವ ದಸರಾ ಮಹೋತ್ಸವಕ್ಕೆ ಅಂತರ ರಾಜ್ಯದಿಂದ ಮೈಸೂರು ನಗರಕ್ಕೆ ಹಾಗೂ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕು ವ್ಯಾಪ್ತಿಯ ಕೃಷ್ಣರಾಜ್ಯ ಸಾಗರ ಜಲಾಶಯ ವೀಕ್ಷಿಸಲು ಆಗಮಿಸುವ ಪ್ರವಾಸಿ ವಾಹನಗಳಿಗೆ ಮಾತ್ರ ಅನ್ವಯಿಸುವಂತೆ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...