Sunday, August 23, 2026
Sunday, August 23, 2026

ಹೊರ ರಾಜ್ಯದ ಪ್ರವಾಸಿಗರ ವಾಹನಕ್ಕೆ ದಸರಾ ವಿಶೇಷ ತೆರಿಗೆ ವಿನಾಯಿತಿ

Date:

ವಿಶ್ವವಿಖ್ಯಾತ ಮೈಸೂರು ದಸರಾ ಗೆ ತೆರಳುವಂತ ಹೊರ ರಾಜ್ಯದ ಪ್ರವಾಸಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿ, ರಾಜ್ಯ ಸರ್ಕಾರ ವಾಹನ ತೆರಿಗೆಯಿಂದ ವಿನಾಯ್ತಿಯನ್ನು ಘೋಷಣೆ ಮಾಡಿದೆ.

ಈ ಕುರಿತಂತೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದೆ. ಸಾರ್ವಜನಿಕರ ಹಿತದೃಷ್ಠಿಯಿಂದ, ಕರ್ನಾಟಕ ಹೊರತುಪಡಿಸಿ. ಇತರೆ ರಾಜ್ಯಗಳಲ್ಲಿ ನೋಂದಾಯಿಸಲ್ಪಟ್ಟ ಮತ್ತು ಆ ರಾಜ್ಯದಲ್ಲಿ ತೆರಿಗೆ ಪಾವತಿಸಿರುವ ವಾಹನಗಳಿಗೆ ತೆರಿಗೆ ಪಾವತಿಯಿಂದ ವಿನಾಯ್ತಿ ನೀಡಲು ಸರ್ಕಾರವು ತೀರ್ಮಾನಿಸಿದೆ ಎಂದಿದ್ದಾರೆ.

ಸರ್ಕಾರದ ತೀರ್ಮಾನದಂತೆ ವಿಶೇಷ ರಹದಾರಿ ಪಡೆದು ದಿನಾಂಕ 29-09-2022ರಿಂದ ದಿನಾಂಕ 06-10-2022ರ ನಡೆಯಲಿರುವ ದಸರಾ ಮಹೋತ್ಸವಕ್ಕೆ ಅಂತರ ರಾಜ್ಯದಿಂದ ಮೈಸೂರು ನಗರಕ್ಕೆ ಹಾಗೂ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕು ವ್ಯಾಪ್ತಿಯ ಕೃಷ್ಣರಾಜ್ಯ ಸಾಗರ ಜಲಾಶಯ ವೀಕ್ಷಿಸಲು ಆಗಮಿಸುವ ಪ್ರವಾಸಿ ವಾಹನಗಳಿಗೆ ಮಾತ್ರ ಅನ್ವಯಿಸುವಂತೆ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...