Sunday, December 7, 2025
Sunday, December 7, 2025

ವಸುಧೈವ ಕುಟುಂಬಕಂ ತತ್ವಾಧಾರಿತ ಭಾರತೀಯತೆ ನಮ್ಮದು- ಭಾಗವತ್

Date:

ರಾಷ್ಟ್ರೀಯತೆಯ ಭಾರತೀಯ ಪರಿಕಲ್ಪನೆ ವಸುದೈವ ಕುಟುಂಬಕಂ ಎಂಬ ತತ್ವವನ್ನು ಮುಂದುವರಿಸುವಂಥದ್ದು. ಇದರಿಂದ ಯಾವ ದೇಶಕ್ಕೂ ಅಪಾಯ ಇಲ್ಲ. ಆದ್ದರಿಂದ ಭಾರತದಲ್ಲಿ ಹಿಟ್ಲರ್ ಆಗಲು ಸಾಧ್ಯವಿಲ್ಲ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ.

ದೆಹಲಿಯಲ್ಲಿ ಮಾಜಿ ಅಧಿಕಾರಿಗಳ ಸಂಘಟನೆಯಾದ ಸಂಕಲ್ಪ ಫೌಂಡೇಷನ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡುವ ವೇಳೆ ಈ ಅಭಿಪ್ರಾಯ ವ್ಯಕ್ತಪಡಿಸಿದರು.

ನಮ್ಮ ರಾಷ್ಟ್ರೀಯತೆ ಇತರ ಯಾರಿಗೂ ಅಪಾಯಕಾರಿಯಾಗುವುದಿಲ್ಲ. ಅದು ನಮ್ಮ ಸ್ವಭಾವವೂ ಅಲ್ಲ. ಇಡೀ ವಿಶ್ವ ಒಂದು ಕುಟುಂಬ (ವಸುದೈವ ಕುಟುಂಬಕಂ) ಎಂದು ನಮ್ಮ ರಾಷ್ಟ್ರೀಯತೆ ಪ್ರತಿಪಾದಿಸುತ್ತದೆ. ಈ ಭಾವನೆಯನ್ನು ಜಗತ್ತಿನಾದ್ಯಂತ ಪಸರಿಸುತ್ತದೆ. ಆದ್ದರಿಂದ ಭಾರತದಲ್ಲಿ ಹಿಟ್ಲರ್ ಆಗಲು ಸಾಧ್ಯವಿಲ್ಲ. ಒಂದು ವೇಳೆ ಯಾರಾದರೂ ಆಗಲು ಹೊರಟರೆ ದೇಶದ ಜನ ಅವರನ್ನು ಕೆಳಗೆ ಇಳಿಸುತ್ತಾರೆ” ಎಂದು ಅವರು ಹೇಳಿದರು.

ಪ್ರತಿಯೊಬ್ಬರೂ ಜಾಗತಿಕ ಮಾರುಕಟ್ಟೆ ಬಗ್ಗೆ ಮಾತನಾಡುತ್ತಾರೆ. ಆದರೆ ಭಾರತ ಮಾತ್ರ ವಸುದೈವ ಕುಟುಂಬಕಮ್ ಬಗ್ಗೆ ಮಾತನಾಡುತ್ತಿದೆ. ಇಷ್ಟು ಮಾತ್ರವಲ್ಲದೇ ಇಡೀ ವಿಶ್ವವನ್ನು ಒಂದು ಕುಟುಂಬವನ್ನಾಗಿ ಮಾಡುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಭಾರತದ ರಾಷ್ಟ್ರೀಯತೆಯ ಪರಿಕಲ್ಪನೆ ಧರ್ಮ, ಭಾಷೆ ಅಥವಾ ಸಮಾನ ಹಿತಾಸಕ್ತಿಯ ವ್ಯಕ್ತಿಗಳಿಂದ ಆಧರಿತವಾಗಿರುವ ಇತರ ರಾಷ್ಟ್ರೀಯವಾದದ ಪರಿಕಲ್ಪನೆಗಳಿಗಿಂತ ಭಿನ್ನ. ಪ್ರಾಚೀನ ಕಾಲದಿಂದಲೂ ವೈವಿಧ್ಯತೆ ಭಾರತೀಯ ಪರಿಕಲ್ಪನೆಯ ಭಾಗ ಎಂದು ಅವರು ಪ್ರತಿಪಾದಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...