Tuesday, February 3, 2026
Tuesday, February 3, 2026

ವಸುಧೈವ ಕುಟುಂಬಕಂ ತತ್ವಾಧಾರಿತ ಭಾರತೀಯತೆ ನಮ್ಮದು- ಭಾಗವತ್

Date:

ರಾಷ್ಟ್ರೀಯತೆಯ ಭಾರತೀಯ ಪರಿಕಲ್ಪನೆ ವಸುದೈವ ಕುಟುಂಬಕಂ ಎಂಬ ತತ್ವವನ್ನು ಮುಂದುವರಿಸುವಂಥದ್ದು. ಇದರಿಂದ ಯಾವ ದೇಶಕ್ಕೂ ಅಪಾಯ ಇಲ್ಲ. ಆದ್ದರಿಂದ ಭಾರತದಲ್ಲಿ ಹಿಟ್ಲರ್ ಆಗಲು ಸಾಧ್ಯವಿಲ್ಲ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ.

ದೆಹಲಿಯಲ್ಲಿ ಮಾಜಿ ಅಧಿಕಾರಿಗಳ ಸಂಘಟನೆಯಾದ ಸಂಕಲ್ಪ ಫೌಂಡೇಷನ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡುವ ವೇಳೆ ಈ ಅಭಿಪ್ರಾಯ ವ್ಯಕ್ತಪಡಿಸಿದರು.

ನಮ್ಮ ರಾಷ್ಟ್ರೀಯತೆ ಇತರ ಯಾರಿಗೂ ಅಪಾಯಕಾರಿಯಾಗುವುದಿಲ್ಲ. ಅದು ನಮ್ಮ ಸ್ವಭಾವವೂ ಅಲ್ಲ. ಇಡೀ ವಿಶ್ವ ಒಂದು ಕುಟುಂಬ (ವಸುದೈವ ಕುಟುಂಬಕಂ) ಎಂದು ನಮ್ಮ ರಾಷ್ಟ್ರೀಯತೆ ಪ್ರತಿಪಾದಿಸುತ್ತದೆ. ಈ ಭಾವನೆಯನ್ನು ಜಗತ್ತಿನಾದ್ಯಂತ ಪಸರಿಸುತ್ತದೆ. ಆದ್ದರಿಂದ ಭಾರತದಲ್ಲಿ ಹಿಟ್ಲರ್ ಆಗಲು ಸಾಧ್ಯವಿಲ್ಲ. ಒಂದು ವೇಳೆ ಯಾರಾದರೂ ಆಗಲು ಹೊರಟರೆ ದೇಶದ ಜನ ಅವರನ್ನು ಕೆಳಗೆ ಇಳಿಸುತ್ತಾರೆ” ಎಂದು ಅವರು ಹೇಳಿದರು.

ಪ್ರತಿಯೊಬ್ಬರೂ ಜಾಗತಿಕ ಮಾರುಕಟ್ಟೆ ಬಗ್ಗೆ ಮಾತನಾಡುತ್ತಾರೆ. ಆದರೆ ಭಾರತ ಮಾತ್ರ ವಸುದೈವ ಕುಟುಂಬಕಮ್ ಬಗ್ಗೆ ಮಾತನಾಡುತ್ತಿದೆ. ಇಷ್ಟು ಮಾತ್ರವಲ್ಲದೇ ಇಡೀ ವಿಶ್ವವನ್ನು ಒಂದು ಕುಟುಂಬವನ್ನಾಗಿ ಮಾಡುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಭಾರತದ ರಾಷ್ಟ್ರೀಯತೆಯ ಪರಿಕಲ್ಪನೆ ಧರ್ಮ, ಭಾಷೆ ಅಥವಾ ಸಮಾನ ಹಿತಾಸಕ್ತಿಯ ವ್ಯಕ್ತಿಗಳಿಂದ ಆಧರಿತವಾಗಿರುವ ಇತರ ರಾಷ್ಟ್ರೀಯವಾದದ ಪರಿಕಲ್ಪನೆಗಳಿಗಿಂತ ಭಿನ್ನ. ಪ್ರಾಚೀನ ಕಾಲದಿಂದಲೂ ವೈವಿಧ್ಯತೆ ಭಾರತೀಯ ಪರಿಕಲ್ಪನೆಯ ಭಾಗ ಎಂದು ಅವರು ಪ್ರತಿಪಾದಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...