Thursday, August 13, 2026
Thursday, August 13, 2026

ವಸುಧೈವ ಕುಟುಂಬಕಂ ತತ್ವಾಧಾರಿತ ಭಾರತೀಯತೆ ನಮ್ಮದು- ಭಾಗವತ್

Date:

ರಾಷ್ಟ್ರೀಯತೆಯ ಭಾರತೀಯ ಪರಿಕಲ್ಪನೆ ವಸುದೈವ ಕುಟುಂಬಕಂ ಎಂಬ ತತ್ವವನ್ನು ಮುಂದುವರಿಸುವಂಥದ್ದು. ಇದರಿಂದ ಯಾವ ದೇಶಕ್ಕೂ ಅಪಾಯ ಇಲ್ಲ. ಆದ್ದರಿಂದ ಭಾರತದಲ್ಲಿ ಹಿಟ್ಲರ್ ಆಗಲು ಸಾಧ್ಯವಿಲ್ಲ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ.

ದೆಹಲಿಯಲ್ಲಿ ಮಾಜಿ ಅಧಿಕಾರಿಗಳ ಸಂಘಟನೆಯಾದ ಸಂಕಲ್ಪ ಫೌಂಡೇಷನ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡುವ ವೇಳೆ ಈ ಅಭಿಪ್ರಾಯ ವ್ಯಕ್ತಪಡಿಸಿದರು.

ನಮ್ಮ ರಾಷ್ಟ್ರೀಯತೆ ಇತರ ಯಾರಿಗೂ ಅಪಾಯಕಾರಿಯಾಗುವುದಿಲ್ಲ. ಅದು ನಮ್ಮ ಸ್ವಭಾವವೂ ಅಲ್ಲ. ಇಡೀ ವಿಶ್ವ ಒಂದು ಕುಟುಂಬ (ವಸುದೈವ ಕುಟುಂಬಕಂ) ಎಂದು ನಮ್ಮ ರಾಷ್ಟ್ರೀಯತೆ ಪ್ರತಿಪಾದಿಸುತ್ತದೆ. ಈ ಭಾವನೆಯನ್ನು ಜಗತ್ತಿನಾದ್ಯಂತ ಪಸರಿಸುತ್ತದೆ. ಆದ್ದರಿಂದ ಭಾರತದಲ್ಲಿ ಹಿಟ್ಲರ್ ಆಗಲು ಸಾಧ್ಯವಿಲ್ಲ. ಒಂದು ವೇಳೆ ಯಾರಾದರೂ ಆಗಲು ಹೊರಟರೆ ದೇಶದ ಜನ ಅವರನ್ನು ಕೆಳಗೆ ಇಳಿಸುತ್ತಾರೆ” ಎಂದು ಅವರು ಹೇಳಿದರು.

ಪ್ರತಿಯೊಬ್ಬರೂ ಜಾಗತಿಕ ಮಾರುಕಟ್ಟೆ ಬಗ್ಗೆ ಮಾತನಾಡುತ್ತಾರೆ. ಆದರೆ ಭಾರತ ಮಾತ್ರ ವಸುದೈವ ಕುಟುಂಬಕಮ್ ಬಗ್ಗೆ ಮಾತನಾಡುತ್ತಿದೆ. ಇಷ್ಟು ಮಾತ್ರವಲ್ಲದೇ ಇಡೀ ವಿಶ್ವವನ್ನು ಒಂದು ಕುಟುಂಬವನ್ನಾಗಿ ಮಾಡುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಭಾರತದ ರಾಷ್ಟ್ರೀಯತೆಯ ಪರಿಕಲ್ಪನೆ ಧರ್ಮ, ಭಾಷೆ ಅಥವಾ ಸಮಾನ ಹಿತಾಸಕ್ತಿಯ ವ್ಯಕ್ತಿಗಳಿಂದ ಆಧರಿತವಾಗಿರುವ ಇತರ ರಾಷ್ಟ್ರೀಯವಾದದ ಪರಿಕಲ್ಪನೆಗಳಿಗಿಂತ ಭಿನ್ನ. ಪ್ರಾಚೀನ ಕಾಲದಿಂದಲೂ ವೈವಿಧ್ಯತೆ ಭಾರತೀಯ ಪರಿಕಲ್ಪನೆಯ ಭಾಗ ಎಂದು ಅವರು ಪ್ರತಿಪಾದಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...