Monday, December 15, 2025
Monday, December 15, 2025

ಎನ್ಎಸ್ಎಸ್ ನಿಂದ ದೇಶಪ್ರೇಮಿಗಳಾಗಿ-ಡಾ.ಗಿರಿಧರ್

Date:

ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ತೊಡಗಿಸಿಕೊಂಡು ದೇಶಪ್ರೇಮಿಗಳಾಗಿ ಎಂದು ಸಹ್ಯಾದ್ರಿ ವಾಣಿಜ್ಯ ಕಾಲೇಜಿನ ಎಂ ಬಿ ಎ ವಿಭಾಗದ ಮುಖ್ಯಸ್ಥರಾದ ಡಾ. ಗಿರಿಧರ್ ಕೆ.ವಿ ನುಡಿದರು.


ಅವರು ಇಂದು ಬೆಳಿಗ್ಗೆ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಚಂದನ ಹಾಲಿನಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಯುವಶಕ್ತಿಯಿಂದ ದೇಶವನ್ನು ಉತ್ತಮ ಹಾದಿಯಲ್ಲಿ ನಿರ್ಮಾಣ ಮಾಡಬಹುದು ಯುವಶಕ್ತಿ ದೇಶದ ಆಸ್ತಿ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ 6 ಲಕ್ಷಕ್ಕೂ ಹೆಚ್ಚು ಸ್ವಯಂಸೇವಕರು ಸೇವೆ ಸಲ್ಲಿಸುತ್ತಿದ್ದಾರೆ.


ರಾಷ್ಟ್ರೀಯ ಸೇವಾ ಯೋಜನೆ ನಮ್ಮ ವಿದ್ಯಾಭ್ಯಾಸದ ಜೊತೆಗೆ ನಮ್ಮನ್ನು ಸೃಜನಶೀಲರನ್ನಾಗಿಸುವುದರ ಜೊತೆಯಲ್ಲಿ ದೈಹಿಕವಾಗಿ ಮಾನಸಿಕವಾಗಿ ಸದೃಢನಾಗಿಸುವುದು, ಪರಸ್ಪರ ಓಡನಾಟ ಹೆಚ್ಚುವುದು ಮತ್ತು ಜೊತೆಗೆ ಗ್ರಾಮೀಣ ಬದುಕಿನ ಪರಿಚಯವಾಗುತ್ತದೆ ರಾಷ್ಟ್ರೀಯ ಸೇವಾ ಯೋಜನೆ ಅಡಿಯಲ್ಲಿ ಆಚಾರ್ಯ ತುಳಿಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಅತ್ಯುತ್ತಮ ಕಾರ್ಯಗಳನ್ನು ಮಾಡಿ ರಾಜ್ಯ ಪ್ರಶಸ್ತಿಗೆ ಭಾಜನರಾಗಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ನುಡಿದರು.
ಇದೇ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ
ಜಿ ವಿಜಯ್ ಕುಮಾರ್ ರವರು ಮಾತನಾಡುತ್ತಾ
ರಾಷ್ಟ್ರೀಯ ಸೇವಾ ಯೋಜನೆಯೆಲ್ಲಿ ತೊಡಗಿಸಿಕೊಳ್ಳುವುದರಿಂದ ನಮ್ಮ ಪ್ರಪಂಚಜ್ಞಾನ ವೃದ್ಧಿಯಾಗುವುದು ಜೊತೆಗೆ ಸೇವಾ ಮನೋಭಾವನೆಗೆ ಹಾಗೂ ಮನುಕುಲದ ಸೇವೆಯಲ್ಲಿ ನಮ್ಮನ್ನು ನಾವು ಹೇಗೆ ತೊಡಗಿಸಿಕೊಳ್ಳಬಹುದೆಂದು ತಿಳಿಯುತ್ತದೆ ಎಂದು ತಿಳಿಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು
ಪ್ರೊ. ಹೆಚ್ ಎಮ್ ಸುರೇಶ್ ಪ್ರಾಂಶುಪಾಲರು ಆಚಾರ್ಯ ತುಳಿಸಿ ವಾಣಿಜ್ಯ ಕಾಲೇಜು ಇವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಭಾಗವಹಿಸಿ ಗ್ರಾಮೀಣ ಬದುಕಿನ ಪರಿಸ್ಥಿತಿಗಳು ಹಾಗೂ ಸೇವೆಗಳನ್ನು ಮಾಡಲು ಒಳ್ಳೆಯ ಅವಕಾಶವಾಗಿದೆ ವಿದ್ಯಾರ್ಥಿಗಳು ತಮ್ಮ ಕಾಲೇಜಿನ ದಿನಗಳಲ್ಲಿ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳುವುದರಿಂದ ಮುಂದಿನ ದಿನಗಳಲ್ಲಿ ಒಳ್ಳೆಯ ನಾಯಕನಾಗುವ ಗುಣಗಳು ಬೆಳೆಯುತ್ತದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಮುಖ್ಯ ಅತಿಥಿಗಳಿಗೆ ಹಾಗೂ ಎನ್ ಎಸ್ ಎಸ್ ಅಧಿಕಾರಿಗಳಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ
ಪ್ರೊ ಕೆ ಎಮ್ ನಾಗರಾಜ್, ಪ್ರೊ ಖಾಜಿಮ್ ಶೆರಿಫ್,
ಪ್ರೊ ಎಸ್ ಜಗದೀಶ್, ಪ್ರೊ ಎನ್ ಮಂಜುನಾಥ್
ಹಾಗೂ ಉಪನ್ಯಾಸಕರು ಸಿಬ್ಬಂದಿಗಳು ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...